‘ಕೇಜ್ರಿವಾಲ್ ಯಾವತ್ತೂ ಟೀಕೆಯ ಧ್ವನಿಯಲ್ಲೇ ಮಾತನಾಡುತ್ತಾರೆ. ಹಾಗೆ ನೋಡಿದರೆ, ಆರೋಗ್ಯವು ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ಇದು ಸಾಂಕ್ರಾಮಿಕ ರೋಗವಾಗಿರುವುದರಿಂದ, ರಾಜ್ಯದ ಪ್ರಯತ್ನಗಳಿಗೆ ಸಹಾಯ ಮಾಡುವುದು ಮತ್ತು ನೆರವು ನೀಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಈವರೆಗೆ ಲಸಿಕೆಯನ್ನು ಕೇಂದ್ರ ಸರ್ಕಾರವೇ ಪೂರೈಸಿದೆ. ಪ್ರತಿ ಹತ್ತು ಲಕ್ಷ ಜನಸಂಖ್ಯೆಗೆ ಅನುಗುಣವಾಗಿ ನೋಡಿದರೆ ದೆಹಲಿಗೆ ಇತರ ರಾಜ್ಯಗಳಿಗಿಂತ ಹೆಚ್ಚು ಲಸಿಕೆ ಪೂರೈಕೆಯಾಗಿದೆ’ ಎಂದು ಖಟ್ಟರ್ ಹೇಳಿದ್ದಾರೆ.