ಈ ವಿಚಾರವಾಗಿ ಗುರುವಾರ ಸಂಜೆ ಟ್ವೀಟ್ ಮಾಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, 'ನಮ್ಮ ಕೊನೆಯ ಉಸಿರಿನವರೆಗೂ ರೈತರೊಂದಿಗೆ ನಾವು ನಿಲ್ಲಲಿದ್ದೇವೆ ಎಂಬುದನ್ನು ಬಿಜೆಪಿ ಅರ್ಥಮಾಡಿಕೊಳ್ಳಬೇಕು. ಇಂತಹ ಹೇಡಿತನದ ದಾಳಿಗೆ ನಾವು ಹೆದರುವುದಿಲ್ಲ. ಬಿಜೆಪಿಯ ದಾಳಿಯಿಂದ ಎಎಪಿ ಕಾರ್ಯಕರ್ತರು ಪ್ರಚೋದನೆಗೆ ಒಳಗಾಗಬಾರದು ಎಂದು ಮನವಿ ಮಾಡುತ್ತೇನೆ. ಮತ್ತೊಮ್ಮೆ ರೈತರಿಗೆ ಬೆಂಬಲ ಸೂಚಿಸುತ್ತೇನೆ' ಎಂದು ತಿಳಿಸಿದ್ದರು.