<p data-placeholder="Translation" dir="ltr" id="tw-target-text"><strong>ನವದೆಹಲಿ:</strong> ಕೊರೊನಾ ವೈರಸ್ನಿಂದಾಗಿ ಎಲ್ಲ ಜನರು ತೊಂದರೆ ಅನುಭವಿಸುತ್ತಿದ್ದು, ಕೋವಿಡ್-19 ಲಸಿಕೆ ದೇಶದಾದ್ಯಂತ ಉಚಿತವಾಗಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.</p>.<p>ಕೋವಿಡ್-19 ಲಸಿಕೆ ಇನ್ನೂ ಸಿದ್ಧವಾಗದಿದ್ದರೂ ಕೂಡ ಅಧಿಕಾರಕ್ಕೆ ಬಂದರೆ ಉಚಿತವಾಗಿ ಲಸಿಕೆಯನ್ನು ವಿತರಿಸಲಾಗುವುದು ಎಂದು ಬಿಜೆಪಿ, ಬಿಹಾರ ವಿಧಾನಸಭಾ ಪ್ರಣಾಳಿಕೆಯಲ್ಲಿ ಪ್ರಕಟಿಸಿದ ಬಳಿಕ ಬಿಹಾರದ ಜನರಿಗೆ ಮಾತ್ರ ಉಚಿತವಾಗಿ ಲಸಿಕೆ ಲಭ್ಯವಾಗಬೇಕೇ ಎನ್ನುವ ಕುರಿತಾದ ಚರ್ಚೆಗಳು ಆರಂಭವಾಗಿವೆ.</p>.<p>ಈಶಾನ್ಯ ದೆಹಲಿಯಲ್ಲಿ ಎರಡು ಮೇಲು ಸೇತುವೆ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಇಡೀ ದೇಶವೇ ಉಚಿತವಾಗಿ ಕೋವಿಡ್-19 ಲಸಿಕೆ ಪಡೆಯಬೇಕು. ಇದು ಇಡೀ ದೇಶದ ಹಕ್ಕು. ಕೊರೊನಾ ವೈರಸ್ ಸೋಂಕಿನಿಂದಾಗಿ ಎಲ್ಲ ಜನರು ಸಮಸ್ಯೆಗೆ ಸಿಲುಕಿದ್ದಾರೆ. ಹಾಗಾಗಿ ಲಸಿಕೆಯು ದೇಶದ ಪ್ರತಿಯೊಬ್ಬರಿಗೂ ಲಭ್ಯವಾಗಬೇಕು ಎಂದು ತಿಳಿಸಿದ್ದಾರೆ.</p>.<p>ಕೊರೊನಾ ವೈರಸ್ ಲಸಿಕೆ ಒಮ್ಮೆ ಲಭ್ಯವಾದರೆ, ವಿಶೇಷ ಕೋವಿಡ್-19 ರೋಗನಿರೋಧಕ ಕಾರ್ಯಕ್ರಮದಡಿಯಲ್ಲಿ ಕೇಂದ್ರವು ನೇರವಾಗಿ ಔಷಧಗಳನ್ನು ಸಂಗ್ರಹಿಸಿ ಆದ್ಯತೆ ಮೇರೆಗೆ ಅಗತ್ಯವಿರುವವರಿಗೆ ಲಭ್ಯವಾಗುವಂತೆ ವಿತರಿಸಲಾಗುವುದು ಎಂದು ಕಚೇರಿಯ ಅಧಿಕೃತ ಮೂಲಗಳು ತಿಳಿಸಿವೆ.</p>.<p>ಅವರ ಪ್ರಕಾರ, ಅಸ್ತಿತ್ವದಲ್ಲಿರುವ ರಾಜ್ಯಗಳು ಮತ್ತು ಜಿಲ್ಲೆಗಳ ಜಾಲದ ಮೂಲಕ ಲಸಿಕೆಯನ್ನು ಆದ್ಯತೆಯ ಗುಂಪುಗಳಿಗೆ ಉಚಿತವಾಗಿ ಲಭ್ಯವಾಗುವಂತೆ ಕೇಂದ್ರವು ನೇರವಾಗಿ ಸಂಗ್ರಹಿಸುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p data-placeholder="Translation" dir="ltr" id="tw-target-text"><strong>ನವದೆಹಲಿ:</strong> ಕೊರೊನಾ ವೈರಸ್ನಿಂದಾಗಿ ಎಲ್ಲ ಜನರು ತೊಂದರೆ ಅನುಭವಿಸುತ್ತಿದ್ದು, ಕೋವಿಡ್-19 ಲಸಿಕೆ ದೇಶದಾದ್ಯಂತ ಉಚಿತವಾಗಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.</p>.<p>ಕೋವಿಡ್-19 ಲಸಿಕೆ ಇನ್ನೂ ಸಿದ್ಧವಾಗದಿದ್ದರೂ ಕೂಡ ಅಧಿಕಾರಕ್ಕೆ ಬಂದರೆ ಉಚಿತವಾಗಿ ಲಸಿಕೆಯನ್ನು ವಿತರಿಸಲಾಗುವುದು ಎಂದು ಬಿಜೆಪಿ, ಬಿಹಾರ ವಿಧಾನಸಭಾ ಪ್ರಣಾಳಿಕೆಯಲ್ಲಿ ಪ್ರಕಟಿಸಿದ ಬಳಿಕ ಬಿಹಾರದ ಜನರಿಗೆ ಮಾತ್ರ ಉಚಿತವಾಗಿ ಲಸಿಕೆ ಲಭ್ಯವಾಗಬೇಕೇ ಎನ್ನುವ ಕುರಿತಾದ ಚರ್ಚೆಗಳು ಆರಂಭವಾಗಿವೆ.</p>.<p>ಈಶಾನ್ಯ ದೆಹಲಿಯಲ್ಲಿ ಎರಡು ಮೇಲು ಸೇತುವೆ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಇಡೀ ದೇಶವೇ ಉಚಿತವಾಗಿ ಕೋವಿಡ್-19 ಲಸಿಕೆ ಪಡೆಯಬೇಕು. ಇದು ಇಡೀ ದೇಶದ ಹಕ್ಕು. ಕೊರೊನಾ ವೈರಸ್ ಸೋಂಕಿನಿಂದಾಗಿ ಎಲ್ಲ ಜನರು ಸಮಸ್ಯೆಗೆ ಸಿಲುಕಿದ್ದಾರೆ. ಹಾಗಾಗಿ ಲಸಿಕೆಯು ದೇಶದ ಪ್ರತಿಯೊಬ್ಬರಿಗೂ ಲಭ್ಯವಾಗಬೇಕು ಎಂದು ತಿಳಿಸಿದ್ದಾರೆ.</p>.<p>ಕೊರೊನಾ ವೈರಸ್ ಲಸಿಕೆ ಒಮ್ಮೆ ಲಭ್ಯವಾದರೆ, ವಿಶೇಷ ಕೋವಿಡ್-19 ರೋಗನಿರೋಧಕ ಕಾರ್ಯಕ್ರಮದಡಿಯಲ್ಲಿ ಕೇಂದ್ರವು ನೇರವಾಗಿ ಔಷಧಗಳನ್ನು ಸಂಗ್ರಹಿಸಿ ಆದ್ಯತೆ ಮೇರೆಗೆ ಅಗತ್ಯವಿರುವವರಿಗೆ ಲಭ್ಯವಾಗುವಂತೆ ವಿತರಿಸಲಾಗುವುದು ಎಂದು ಕಚೇರಿಯ ಅಧಿಕೃತ ಮೂಲಗಳು ತಿಳಿಸಿವೆ.</p>.<p>ಅವರ ಪ್ರಕಾರ, ಅಸ್ತಿತ್ವದಲ್ಲಿರುವ ರಾಜ್ಯಗಳು ಮತ್ತು ಜಿಲ್ಲೆಗಳ ಜಾಲದ ಮೂಲಕ ಲಸಿಕೆಯನ್ನು ಆದ್ಯತೆಯ ಗುಂಪುಗಳಿಗೆ ಉಚಿತವಾಗಿ ಲಭ್ಯವಾಗುವಂತೆ ಕೇಂದ್ರವು ನೇರವಾಗಿ ಸಂಗ್ರಹಿಸುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>