<p><strong>ಭೋಪಾಲ್</strong>: ಮಧ್ಯಪ್ರದೇಶದಲ್ಲಿ ಮುಂಬರುವ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯ ನೀಡುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಮಂಗಳವಾರ ಘೋಷಿಸಿದ್ದಾರೆ.</p>.<p>ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ನ ದಸರಾ ಮೈದಾನದಲ್ಲಿ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಅವರು, ‘ಎಎಪಿ ಸರ್ಕಾರವು ಅಧಿಕಾರಕ್ಕೆ ಬಂದರೆ ನೌಕರರ ಸೇವೆಯನ್ನು ಖಾಯಂಗೊಳಿಸುವುದರ ಜತೆಗೆ ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಕೊನೆಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ನೀಡಿ, ದೆಹಲಿ ಮತ್ತು ಪಂಜಾಬ್ನಂತೆ ನಾನು ಮಧ್ಯಪ್ರದೇಶದಲ್ಲಿಯೂ ಉಚಿತ ವಿದ್ಯುತ್ ನೀಡುತ್ತೇನೆ’ ಎಂದು ಕ್ರೇಜಿವಾಲ್ ಹೇಳಿದರು.</p>.<p>ದೆಹಲಿ ಮತ್ತು ಪಂಜಾಬ್ನಲ್ಲಿ ಎಎಪಿ ಸರ್ಕಾರ ಮಾಡಿರುವ ಕೆಲಸಗಳನ್ನು ಒತ್ತಿ ಹೇಳುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕಿ ಮಧ್ಯಪ್ರದೇಶದಲ್ಲಿ ಎಎಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇದ್ದರು.</p>.<p>ಇವನ್ನೂ ಓದಿ: <a href="https://www.prajavani.net/india-news/kingpin-of-bihar-based-arms-racket-arrested-from-kolkata-1023470.html" itemprop="url">ಕೋಲ್ಕತ್ತ: ಶಸ್ತ್ರಾಸ್ತ್ರ, ಮಾದಕ ವಸ್ತು ದಂಧೆಯ ಕಿಂಗ್ಪಿನ್ ಬಂಧನ </a></p>.<p> <a href="https://www.prajavani.net/india-news/india-will-be-declared-hindu-rashtra-by-2026-says-bjp-mla-t-raja-singh-1023480.html" itemprop="url">2026ರ ವೇಳೆಗೆ ಹಿಂದೂ ರಾಷ್ಟ್ರವಾಗಿ ಭಾರತ: ಬಿಜೆಪಿ ಶಾಸಕ ಟಿ. ರಾಜಾಸಿಂಗ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ಮಧ್ಯಪ್ರದೇಶದಲ್ಲಿ ಮುಂಬರುವ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯ ನೀಡುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಮಂಗಳವಾರ ಘೋಷಿಸಿದ್ದಾರೆ.</p>.<p>ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ನ ದಸರಾ ಮೈದಾನದಲ್ಲಿ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಅವರು, ‘ಎಎಪಿ ಸರ್ಕಾರವು ಅಧಿಕಾರಕ್ಕೆ ಬಂದರೆ ನೌಕರರ ಸೇವೆಯನ್ನು ಖಾಯಂಗೊಳಿಸುವುದರ ಜತೆಗೆ ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಕೊನೆಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ನೀಡಿ, ದೆಹಲಿ ಮತ್ತು ಪಂಜಾಬ್ನಂತೆ ನಾನು ಮಧ್ಯಪ್ರದೇಶದಲ್ಲಿಯೂ ಉಚಿತ ವಿದ್ಯುತ್ ನೀಡುತ್ತೇನೆ’ ಎಂದು ಕ್ರೇಜಿವಾಲ್ ಹೇಳಿದರು.</p>.<p>ದೆಹಲಿ ಮತ್ತು ಪಂಜಾಬ್ನಲ್ಲಿ ಎಎಪಿ ಸರ್ಕಾರ ಮಾಡಿರುವ ಕೆಲಸಗಳನ್ನು ಒತ್ತಿ ಹೇಳುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕಿ ಮಧ್ಯಪ್ರದೇಶದಲ್ಲಿ ಎಎಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇದ್ದರು.</p>.<p>ಇವನ್ನೂ ಓದಿ: <a href="https://www.prajavani.net/india-news/kingpin-of-bihar-based-arms-racket-arrested-from-kolkata-1023470.html" itemprop="url">ಕೋಲ್ಕತ್ತ: ಶಸ್ತ್ರಾಸ್ತ್ರ, ಮಾದಕ ವಸ್ತು ದಂಧೆಯ ಕಿಂಗ್ಪಿನ್ ಬಂಧನ </a></p>.<p> <a href="https://www.prajavani.net/india-news/india-will-be-declared-hindu-rashtra-by-2026-says-bjp-mla-t-raja-singh-1023480.html" itemprop="url">2026ರ ವೇಳೆಗೆ ಹಿಂದೂ ರಾಷ್ಟ್ರವಾಗಿ ಭಾರತ: ಬಿಜೆಪಿ ಶಾಸಕ ಟಿ. ರಾಜಾಸಿಂಗ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>