<p><strong>ನವದೆಹಲಿ:</strong> ‘ದೇಶ ಮತ್ತು ಜನ ಸಂಕಷ್ಟದಲ್ಲಿದ್ದಾರೆ. ನಮ್ಮ ಪಕ್ಷದ ಸ್ವಯಂ ಸೇವಕರು ಸಾಧ್ಯವಿರುವ ಎಲ್ಲ ಹಂತಗಳಲ್ಲೂ ಜನರ ಸಹಾಯಕ್ಕೆ ನಿಲ್ಲಬೇಕು ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಅರವಿಂದ ಕೇಜ್ರಿವಾಲ್ ಮನವಿ ಮಾಡಿದರು.</p>.<p>ಆಮ್ ಆದ್ಮಿ ಪಕ್ಷದ 8ನೇ ಸಂಸ್ಥಾಪನಾ ದಿನದ ನೆನಪಿನಲ್ಲಿ ಗುರುವಾರ ಟ್ವೀಟ್ ಮಾಡಿರುವ ಅವರು, ‘ಈ ಸಮಯದಲ್ಲಿ ಯಾವುದೇ ರಾಜಕೀಯ ಮಾಡಬಾರದು. ಪಕ್ಷದ ಕಾರ್ಯಕರ್ತರು ಜನರ ಸೇವೆಗೆ ನಿಲ್ಲಬೇಕು‘ ಎಂದು ತಿಳಿಸಿದ್ದಾರೆ.</p>.<p>‘ಇಂದು ನಮ್ಮ ಪಕ್ಷದ ಎಂಟನೇ ಪ್ರತಿಷ್ಠಾನ ದಿನ. ನಿಮ್ಮೆಲ್ಲರಿಗೂ ಅಭಿನಂದನೆಗಳು. ಸಂಕಷ್ಟದ ಈ ಸಮಯದಲ್ಲಿ ಸಾಧ್ಯವಿರುವ ಎಲ್ಲ ರೀತಿಯಲ್ಲೂ ಜನರಿಗೆ ನೆರವಾಗಿ. ಮಾಸ್ಕ್ ವಿತರಿಸಿ, ಅನಾರೋಗ್ಯದಿಂದ ಬಳಲುವವರಿಗೆ ಆಸ್ಪತ್ರೆಗೆ ಹೋಗಲು ವಾಹನ ವ್ಯವಸ್ಥೆ ಕಲ್ಪಿಸಿ. ಹಸಿದವರಿಗೆ ಆಹಾರ ನೀಡಿ. ಈ ಸಮಯದಲ್ಲಿ ಯಾವುದೇ ರಾಜಕೀಯ ಮಾಡಬೇಡಿ‘ ಎಂದು ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ದೇಶ ಮತ್ತು ಜನ ಸಂಕಷ್ಟದಲ್ಲಿದ್ದಾರೆ. ನಮ್ಮ ಪಕ್ಷದ ಸ್ವಯಂ ಸೇವಕರು ಸಾಧ್ಯವಿರುವ ಎಲ್ಲ ಹಂತಗಳಲ್ಲೂ ಜನರ ಸಹಾಯಕ್ಕೆ ನಿಲ್ಲಬೇಕು ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಅರವಿಂದ ಕೇಜ್ರಿವಾಲ್ ಮನವಿ ಮಾಡಿದರು.</p>.<p>ಆಮ್ ಆದ್ಮಿ ಪಕ್ಷದ 8ನೇ ಸಂಸ್ಥಾಪನಾ ದಿನದ ನೆನಪಿನಲ್ಲಿ ಗುರುವಾರ ಟ್ವೀಟ್ ಮಾಡಿರುವ ಅವರು, ‘ಈ ಸಮಯದಲ್ಲಿ ಯಾವುದೇ ರಾಜಕೀಯ ಮಾಡಬಾರದು. ಪಕ್ಷದ ಕಾರ್ಯಕರ್ತರು ಜನರ ಸೇವೆಗೆ ನಿಲ್ಲಬೇಕು‘ ಎಂದು ತಿಳಿಸಿದ್ದಾರೆ.</p>.<p>‘ಇಂದು ನಮ್ಮ ಪಕ್ಷದ ಎಂಟನೇ ಪ್ರತಿಷ್ಠಾನ ದಿನ. ನಿಮ್ಮೆಲ್ಲರಿಗೂ ಅಭಿನಂದನೆಗಳು. ಸಂಕಷ್ಟದ ಈ ಸಮಯದಲ್ಲಿ ಸಾಧ್ಯವಿರುವ ಎಲ್ಲ ರೀತಿಯಲ್ಲೂ ಜನರಿಗೆ ನೆರವಾಗಿ. ಮಾಸ್ಕ್ ವಿತರಿಸಿ, ಅನಾರೋಗ್ಯದಿಂದ ಬಳಲುವವರಿಗೆ ಆಸ್ಪತ್ರೆಗೆ ಹೋಗಲು ವಾಹನ ವ್ಯವಸ್ಥೆ ಕಲ್ಪಿಸಿ. ಹಸಿದವರಿಗೆ ಆಹಾರ ನೀಡಿ. ಈ ಸಮಯದಲ್ಲಿ ಯಾವುದೇ ರಾಜಕೀಯ ಮಾಡಬೇಡಿ‘ ಎಂದು ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>