ಇದೇ ವೇಳೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ಲಕ್ಷದ್ವೀಪದಲ್ಲಿ ಕೇಸರಿ ಕಾರ್ಯಸೂಚಿ ಮತ್ತು ಸಾಂಸ್ಥಿಕ ಹಿತಾಸಕ್ತಿಗಳನ್ನು ಹೇರಲು ಮತ್ತು ಜಾರಿಗೆ ತರಲು ಪ್ರಯತ್ನ ನಡೆಯುತ್ತಿದೆ‘ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ತಕ್ಷಣವೇ ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸಬೇಕು. ಲಕ್ಷದ್ವೀಪ ಜನರ ಹಿತಾಸಕ್ತಿ ಕಾಪಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ‘ ಎಂದು ಒತ್ತಾಯಿಸಿದರು.