<p><strong>ತಿರುವನಂತಪುರ: </strong>ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ನಿರ್ಣಯವನ್ನು ಮಂಡಿಸಿದ್ದಾರೆ.</p>.<p>‘ರೈತರ ಸಮಸ್ಯೆಗಳನ್ನು ಚರ್ಚಿಸಲು ಗುರುವಾರ ಒಂದು ಗಂಟೆಯ ವಿಶೇಷ ಅಧಿವೇಶವನ್ನು ಕರೆಯಲಾಗಿತ್ತು. ಈ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಮಂಡಿಸಲಾಗಿದ್ದು, ಆದಷ್ಟು ಬೇಗ ಅವುಗಳನ್ನು ರದ್ದುಗೊಳಿಸಬೇಕು’ ಎಂದು ಒತ್ತಾಯಿಸಲಾಗಿದೆ.</p>.<p>‘ದೇಶದಲ್ಲಿ ಕೇಂದ್ರ ಸರ್ಕಾರದ ಕಾಯ್ದೆ ವಿರುದ್ಧ ಪ್ರತಿಭಟಿಸಲಾಗುತ್ತಿದೆ. ಇದು ಇತಿಹಾಸದಲ್ಲಿ ರೈತರು ಕೈಗೊಂಡ ಮಹತ್ವಪೂರ್ಣ ಪ್ರತಿಭಟನೆ. ಕೇಂದ್ರ ಸರ್ಕಾರದ ಈ ಕಾಯ್ದೆಗಳು, ರೈತ ವಿರೋಧಿ ಮಾತ್ರವಲ್ಲದೇ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದೆ’ ಎಂದು ಪಿಣರಾಯಿ ವಿಜಯನ್ ಅವರು ದೂರಿದ್ದಾರೆ.</p>.<p>‘ಕಳೆದ 35 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ 32 ರೈತರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.</p>.<p>‘ಸರ್ಕಾರದ ಕೆಲವು ಕಾನೂನುಗಳು ನಮ್ಮ ಜೀವನಕ್ಕೆ ಹಾನಿ ಉಂಟು ಮಾಡಬಹುದು ಎಂಬ ಭಯ ಜನರಲ್ಲಿರುವಾಗ, ಅದರ ಬಗ್ಗೆ ಸರಿಯಾದ ಕ್ರಮಕೈಗೊಳ್ಳುವುದು ಶಾಸಕಾಂಗ ಸಭೆಯ ನಾಯಕರ ಕರ್ತವ್ಯ. ಕೃಷಿಯು ನಮ್ಮ ದೇಶದ ಸಂಸ್ಕೃತಿಯ ಒಂದು ಭಾಗವಾಗಿದೆ’ ಎಂದು ಅವರು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ: </strong>ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ನಿರ್ಣಯವನ್ನು ಮಂಡಿಸಿದ್ದಾರೆ.</p>.<p>‘ರೈತರ ಸಮಸ್ಯೆಗಳನ್ನು ಚರ್ಚಿಸಲು ಗುರುವಾರ ಒಂದು ಗಂಟೆಯ ವಿಶೇಷ ಅಧಿವೇಶವನ್ನು ಕರೆಯಲಾಗಿತ್ತು. ಈ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಮಂಡಿಸಲಾಗಿದ್ದು, ಆದಷ್ಟು ಬೇಗ ಅವುಗಳನ್ನು ರದ್ದುಗೊಳಿಸಬೇಕು’ ಎಂದು ಒತ್ತಾಯಿಸಲಾಗಿದೆ.</p>.<p>‘ದೇಶದಲ್ಲಿ ಕೇಂದ್ರ ಸರ್ಕಾರದ ಕಾಯ್ದೆ ವಿರುದ್ಧ ಪ್ರತಿಭಟಿಸಲಾಗುತ್ತಿದೆ. ಇದು ಇತಿಹಾಸದಲ್ಲಿ ರೈತರು ಕೈಗೊಂಡ ಮಹತ್ವಪೂರ್ಣ ಪ್ರತಿಭಟನೆ. ಕೇಂದ್ರ ಸರ್ಕಾರದ ಈ ಕಾಯ್ದೆಗಳು, ರೈತ ವಿರೋಧಿ ಮಾತ್ರವಲ್ಲದೇ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದೆ’ ಎಂದು ಪಿಣರಾಯಿ ವಿಜಯನ್ ಅವರು ದೂರಿದ್ದಾರೆ.</p>.<p>‘ಕಳೆದ 35 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ 32 ರೈತರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.</p>.<p>‘ಸರ್ಕಾರದ ಕೆಲವು ಕಾನೂನುಗಳು ನಮ್ಮ ಜೀವನಕ್ಕೆ ಹಾನಿ ಉಂಟು ಮಾಡಬಹುದು ಎಂಬ ಭಯ ಜನರಲ್ಲಿರುವಾಗ, ಅದರ ಬಗ್ಗೆ ಸರಿಯಾದ ಕ್ರಮಕೈಗೊಳ್ಳುವುದು ಶಾಸಕಾಂಗ ಸಭೆಯ ನಾಯಕರ ಕರ್ತವ್ಯ. ಕೃಷಿಯು ನಮ್ಮ ದೇಶದ ಸಂಸ್ಕೃತಿಯ ಒಂದು ಭಾಗವಾಗಿದೆ’ ಎಂದು ಅವರು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>