<p><strong>ತಿರುವನಂತಪುರ</strong>: ಕೇರಳ ವಿಧಾನಸಭೆಯಲ್ಲಿ 2015ರಲ್ಲಿ ನಡೆದಿದ್ದ ಗದ್ದಲಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ವಿಧಾನಸಭೆಯಲ್ಲಿ ಗುರುವಾರ ಆಗ್ರಹಿಸಿದವು.</p>.<p>ಆದರೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶಿಕ್ಷಣ ಸಚಿವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ವಿರೋಧ ಪಕ್ಷಗಳ ಬೇಡಿಕೆಯನ್ನು ತಳ್ಳಿಹಾಕಿದರು.</p>.<p>ಈ ಪ್ರಕರಣದಲ್ಲಿ ಶಿವನ್ ಕುಟ್ಟಿ ಸೇರಿದಂತೆ ಎಲ್ಡಿಎಫ್ ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ವಾಪಸ್ ಪಡೆಯುವಂತೆ ಕೋರಿ ಕೇರಳ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿತ್ತು. ಇದನ್ನು ಪ್ರಮುಖ ಅಸ್ತ್ರವಾಗಿಸಿಕೊಂಡ ವಿರೋಧ ಪಕ್ಷಗಳು ಗುರುವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡವು.</p>.<p>ಸುಪ್ರೀಂ ಕೋರ್ಟ್ ತೀರ್ಪಿನ ಚರ್ಚೆ ಹಾಗೂ ಶಿಕ್ಷಣ ಸಚಿವರ ರಾಜೀನಾಮೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದವು. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ವಾಕ್ಸಮರ ನಡೆಯಿತು.</p>.<p>ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಮಾರ್ಕ್ಸ್ವಾದಿ ನಾಯಕರು ನ್ಯಾಯಾಂಗ ವಿಚಾರಣೆಯನ್ನು ಎದುರಿಸಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದ ನಂತರವೂ ಶಿವನ್ ಕುಟ್ಟಿ ಅವರು ಸಚಿವರಾಗಿ ಮುಂದುವರಿಯುವುದು ಸರಿಯಲ್ಲ. ಅದು ಅನ್ಯಾಯ. ಕೂಡಲೇ ಮುಖ್ಯಮಂತ್ರಿ ಅವರಿಂದ ರಾಜೀನಾಮೆ ಪಡೆಯಬೇಕು ಅಥವಾ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಬೇಕು ಎಂದು ವಿರೋಧ ಪಕ್ಷಗಳ ಸದಸ್ಯರು ಆಗ್ರಹಿಸಿದರು.</p>.<p>ವಿರೋಧ ಪಕ್ಷಗಳ ಬೇಡಿಕೆಯನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ನ್ಯಾಯಾಲಯವು ಯಾವುದೇ ನಿರ್ದಿಷ್ಟ ವ್ಯಕ್ತಿಯನ್ನು ತಪ್ಪಿತಸ್ಥರೆಂದು ಹೇಳಿಲ್ಲ. ಹಾಗಾಗಿ ಶಿಕ್ಷಣ ಸಚಿವರು ರಾಜೀನಾಮೆ ನೀಡುವ ವಿಷಯ ಬರುವುದಿಲ್ಲ ಎಂದರು.</p>.<p>ಸಂವಿಧಾನ ಬದ್ಧವಾಗಿ ಶಾಸಕಾಂಗ ಮತ್ತು ಅದರ ಸದಸ್ಯರಿಗೆ ಕೆಲವು ಸವಲತ್ತುಗಳು ದೊರೆತಿವೆ. ಶಾಸಕಾಂಗದ ಈ ಸವಲತ್ತಿಗೆ ಸಂಬಂಧಿಸಿದ ವ್ಯವಸ್ಥೆಯನ್ನು ಸಂರಕ್ಷಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದರು.</p>.<p>ಶಾಸಕಾಂಗ ಒಂದು ಸಾರ್ವಭೌಮ ಸಂಸ್ಥೆ. ಸದನದೊಳಗಿನ ಸಮಸ್ಯೆಗಳು ಅಲ್ಲಿಯೇ ಕೊನೆಗೊಳ್ಳಬೇಕು. ಅಂತಹ ಸಮಸ್ಯೆಗಳನ್ನು ಹೊರಗೆ ಎಳೆಯುವುದು ಶಾಸಕಾಂಗದ ಸಾರ್ವಭೌಮತ್ವವನ್ನು ಹಾಳುಮಾಡುವ ಪ್ರವೃತ್ತಿಯನ್ನು ಬಲಪಡಿಸಿದಂತಾಗುತ್ತದೆ ಎಂದು ವಿಜಯನ್ ವಿವರಿಸಿದರು.</p>.<p>ಈ ಪ್ರಕರಣದ ಆರೋಪಿ ಶಾಸಕರ ವಿರುದ್ಧ ಆಗಿನ ವಿಧಾನಸಭಾ ಸ್ಪೀಕರ್ ಆಗಲೇ ಕ್ರಮ ತೆಗೆದುಕೊಂಡಿದ್ದರು. ಈ ಸಂಬಂಧ ಆರೋಪಿಗಳನ್ನು ಅವರು ಸದನದಿಂದ ಅಮಾನತುಗೊಳಿಸಿದ್ದರು. ಒಂದೇ ಅಪರಾಧಕ್ಕೆ ಎರಡೆರಡು ಬಾರಿ ಶಿಕ್ಷೆ ನೀಡುವುದು ನಮ್ಮ ಕಾನೂನು ಪರಿಕಲ್ಪನೆಯ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿವೆ ಎಂದು ಅವರು ಹೇಳಿದರು.</p>.<p>ಅವರು ತಮ್ಮ ನಿಲುವನ್ನು ಸಮರ್ಥಿಸಿಕೊಳ್ಳಲು 1998 ರಿಂದ 2021ರ ನಡುವೆ ದೇಶದ ವಿವಿಧ ರಾಜ್ಯಗಳ ಶಾಸನ ಸಭೆಗಳಲ್ಲಿ ನಡೆದ ಹಿಂಸಾತ್ಮಕ ಘಟನೆಗಳ ವಿವರವಾದ ಪಟ್ಟಿಯನ್ನೂ ನೀಡಿದರು.</p>.<p>ಮುಖ್ಯಮಂತ್ರಿ ಅವರ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳ ವಿಧಾನಸಭೆಯಲ್ಲಿ 2015ರಲ್ಲಿ ನಡೆದಿದ್ದ ಗದ್ದಲಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ವಿಧಾನಸಭೆಯಲ್ಲಿ ಗುರುವಾರ ಆಗ್ರಹಿಸಿದವು.</p>.<p>ಆದರೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶಿಕ್ಷಣ ಸಚಿವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ವಿರೋಧ ಪಕ್ಷಗಳ ಬೇಡಿಕೆಯನ್ನು ತಳ್ಳಿಹಾಕಿದರು.</p>.<p>ಈ ಪ್ರಕರಣದಲ್ಲಿ ಶಿವನ್ ಕುಟ್ಟಿ ಸೇರಿದಂತೆ ಎಲ್ಡಿಎಫ್ ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ವಾಪಸ್ ಪಡೆಯುವಂತೆ ಕೋರಿ ಕೇರಳ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿತ್ತು. ಇದನ್ನು ಪ್ರಮುಖ ಅಸ್ತ್ರವಾಗಿಸಿಕೊಂಡ ವಿರೋಧ ಪಕ್ಷಗಳು ಗುರುವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡವು.</p>.<p>ಸುಪ್ರೀಂ ಕೋರ್ಟ್ ತೀರ್ಪಿನ ಚರ್ಚೆ ಹಾಗೂ ಶಿಕ್ಷಣ ಸಚಿವರ ರಾಜೀನಾಮೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದವು. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ವಾಕ್ಸಮರ ನಡೆಯಿತು.</p>.<p>ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಮಾರ್ಕ್ಸ್ವಾದಿ ನಾಯಕರು ನ್ಯಾಯಾಂಗ ವಿಚಾರಣೆಯನ್ನು ಎದುರಿಸಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದ ನಂತರವೂ ಶಿವನ್ ಕುಟ್ಟಿ ಅವರು ಸಚಿವರಾಗಿ ಮುಂದುವರಿಯುವುದು ಸರಿಯಲ್ಲ. ಅದು ಅನ್ಯಾಯ. ಕೂಡಲೇ ಮುಖ್ಯಮಂತ್ರಿ ಅವರಿಂದ ರಾಜೀನಾಮೆ ಪಡೆಯಬೇಕು ಅಥವಾ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಬೇಕು ಎಂದು ವಿರೋಧ ಪಕ್ಷಗಳ ಸದಸ್ಯರು ಆಗ್ರಹಿಸಿದರು.</p>.<p>ವಿರೋಧ ಪಕ್ಷಗಳ ಬೇಡಿಕೆಯನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ನ್ಯಾಯಾಲಯವು ಯಾವುದೇ ನಿರ್ದಿಷ್ಟ ವ್ಯಕ್ತಿಯನ್ನು ತಪ್ಪಿತಸ್ಥರೆಂದು ಹೇಳಿಲ್ಲ. ಹಾಗಾಗಿ ಶಿಕ್ಷಣ ಸಚಿವರು ರಾಜೀನಾಮೆ ನೀಡುವ ವಿಷಯ ಬರುವುದಿಲ್ಲ ಎಂದರು.</p>.<p>ಸಂವಿಧಾನ ಬದ್ಧವಾಗಿ ಶಾಸಕಾಂಗ ಮತ್ತು ಅದರ ಸದಸ್ಯರಿಗೆ ಕೆಲವು ಸವಲತ್ತುಗಳು ದೊರೆತಿವೆ. ಶಾಸಕಾಂಗದ ಈ ಸವಲತ್ತಿಗೆ ಸಂಬಂಧಿಸಿದ ವ್ಯವಸ್ಥೆಯನ್ನು ಸಂರಕ್ಷಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದರು.</p>.<p>ಶಾಸಕಾಂಗ ಒಂದು ಸಾರ್ವಭೌಮ ಸಂಸ್ಥೆ. ಸದನದೊಳಗಿನ ಸಮಸ್ಯೆಗಳು ಅಲ್ಲಿಯೇ ಕೊನೆಗೊಳ್ಳಬೇಕು. ಅಂತಹ ಸಮಸ್ಯೆಗಳನ್ನು ಹೊರಗೆ ಎಳೆಯುವುದು ಶಾಸಕಾಂಗದ ಸಾರ್ವಭೌಮತ್ವವನ್ನು ಹಾಳುಮಾಡುವ ಪ್ರವೃತ್ತಿಯನ್ನು ಬಲಪಡಿಸಿದಂತಾಗುತ್ತದೆ ಎಂದು ವಿಜಯನ್ ವಿವರಿಸಿದರು.</p>.<p>ಈ ಪ್ರಕರಣದ ಆರೋಪಿ ಶಾಸಕರ ವಿರುದ್ಧ ಆಗಿನ ವಿಧಾನಸಭಾ ಸ್ಪೀಕರ್ ಆಗಲೇ ಕ್ರಮ ತೆಗೆದುಕೊಂಡಿದ್ದರು. ಈ ಸಂಬಂಧ ಆರೋಪಿಗಳನ್ನು ಅವರು ಸದನದಿಂದ ಅಮಾನತುಗೊಳಿಸಿದ್ದರು. ಒಂದೇ ಅಪರಾಧಕ್ಕೆ ಎರಡೆರಡು ಬಾರಿ ಶಿಕ್ಷೆ ನೀಡುವುದು ನಮ್ಮ ಕಾನೂನು ಪರಿಕಲ್ಪನೆಯ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿವೆ ಎಂದು ಅವರು ಹೇಳಿದರು.</p>.<p>ಅವರು ತಮ್ಮ ನಿಲುವನ್ನು ಸಮರ್ಥಿಸಿಕೊಳ್ಳಲು 1998 ರಿಂದ 2021ರ ನಡುವೆ ದೇಶದ ವಿವಿಧ ರಾಜ್ಯಗಳ ಶಾಸನ ಸಭೆಗಳಲ್ಲಿ ನಡೆದ ಹಿಂಸಾತ್ಮಕ ಘಟನೆಗಳ ವಿವರವಾದ ಪಟ್ಟಿಯನ್ನೂ ನೀಡಿದರು.</p>.<p>ಮುಖ್ಯಮಂತ್ರಿ ಅವರ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>