<p class="title"><strong>ಕೊಚ್ಚಿ (ಪಿಟಿಐ):</strong> ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆ ನಡೆಸುತ್ತಿರುವ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು, ಮುಖ್ಯಆರೋಪಿ ಸ್ವಪ್ನಾ ಸುರೇಶ್ ಸೇರಿದಂತೆ 53 ಜನರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.</p>.<p class="title">ನೋಟಿಸ್ ಜಾರಿಯಾದವರಲ್ಲಿ ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಎಂ.ಶಿವಶಂಕರ್, ತಿರುವನಂತಪುರದ ಯುಎಇ ಕಾನ್ಸುಲೇಟ್ನ ಇಬ್ಬರು ಮಾಜಿ ಅಧಿಕಾರಿಗಳೂ ಇದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.</p>.<p class="title">‘ಚಿನ್ನ ಕಳ್ಳಸಾಗಣೆ ಪ್ರಕರಣ ಕುರಿತಂತೆ ಕಸ್ಟಮ್ಸ್ ಕಾಯ್ದೆಯ ಪ್ರಕಾರ ನಿಮ್ಮ ವಿರುದ್ಧ ಏಕೆ ಕ್ರಮಜರುಗಿಸಬಾರದು’ ಎಂದು ಪ್ರಶ್ನಿಸಿ ಕಸ್ಟಮ್ಸ್ ಆಯುಕ್ತ (ನಿಯಂತ್ರಣ) ಸುಮಿತ್ ಕುಮಾರ್ ಜೂನ್ 16ರಂದು ನೋಟಿಸ್ ಜಾರಿಮಾಡಿದ್ದಾರೆ.</p>.<p>ಒಟ್ಟು 167 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡಿದ್ದಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ. ಒಮ್ಮೆ ಸುಮಾರು ₹ 15 ಕೋಟಿ ಮೌಲ್ಯದ 30 ಕೆ.ಜಿ ಚಿನ್ನವನ್ನು ಅಧಿಕಾರಿಗಳು ತಿರುವನಂತಪುರ ವಿಮಾನನಿಲ್ದಾಣದಲ್ಲಿ ಕಾನ್ಸುಲೇಟ್ನ ರಾಜತಾಂತ್ರಿಕರೊಬ್ಬರಿಗೆ ಸೇರಿದ್ದ ಬ್ಯಾಗ್ನಿಂದ ಜುಲೈ 5,2020ರಂದು ಜಪ್ತಿ ಮಾಡಿದ್ದರು.</p>.<p>ಇದೇ ಪ್ರಕರಣದ ಸಂಬಂಧ ಕೇಂದ್ರ ಹಣಕಾಸು ಸಚಿವಾಲಯದ ಮೂಲಕ ಯುಎಇ ಕಾನ್ಸುಲೇಟ್ ಜನರಲ್ ಜಮಾಲ್ ಅಲ್ ಜಬಿ ಮತ್ತು ರಷಿದ್ ಖಮಿಸ್ ಅಲಿ ಅವರಿಗೂ ನೋಟಿಸ್ ಜಾರಿಯಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೊಚ್ಚಿ (ಪಿಟಿಐ):</strong> ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆ ನಡೆಸುತ್ತಿರುವ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು, ಮುಖ್ಯಆರೋಪಿ ಸ್ವಪ್ನಾ ಸುರೇಶ್ ಸೇರಿದಂತೆ 53 ಜನರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.</p>.<p class="title">ನೋಟಿಸ್ ಜಾರಿಯಾದವರಲ್ಲಿ ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಎಂ.ಶಿವಶಂಕರ್, ತಿರುವನಂತಪುರದ ಯುಎಇ ಕಾನ್ಸುಲೇಟ್ನ ಇಬ್ಬರು ಮಾಜಿ ಅಧಿಕಾರಿಗಳೂ ಇದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.</p>.<p class="title">‘ಚಿನ್ನ ಕಳ್ಳಸಾಗಣೆ ಪ್ರಕರಣ ಕುರಿತಂತೆ ಕಸ್ಟಮ್ಸ್ ಕಾಯ್ದೆಯ ಪ್ರಕಾರ ನಿಮ್ಮ ವಿರುದ್ಧ ಏಕೆ ಕ್ರಮಜರುಗಿಸಬಾರದು’ ಎಂದು ಪ್ರಶ್ನಿಸಿ ಕಸ್ಟಮ್ಸ್ ಆಯುಕ್ತ (ನಿಯಂತ್ರಣ) ಸುಮಿತ್ ಕುಮಾರ್ ಜೂನ್ 16ರಂದು ನೋಟಿಸ್ ಜಾರಿಮಾಡಿದ್ದಾರೆ.</p>.<p>ಒಟ್ಟು 167 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡಿದ್ದಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ. ಒಮ್ಮೆ ಸುಮಾರು ₹ 15 ಕೋಟಿ ಮೌಲ್ಯದ 30 ಕೆ.ಜಿ ಚಿನ್ನವನ್ನು ಅಧಿಕಾರಿಗಳು ತಿರುವನಂತಪುರ ವಿಮಾನನಿಲ್ದಾಣದಲ್ಲಿ ಕಾನ್ಸುಲೇಟ್ನ ರಾಜತಾಂತ್ರಿಕರೊಬ್ಬರಿಗೆ ಸೇರಿದ್ದ ಬ್ಯಾಗ್ನಿಂದ ಜುಲೈ 5,2020ರಂದು ಜಪ್ತಿ ಮಾಡಿದ್ದರು.</p>.<p>ಇದೇ ಪ್ರಕರಣದ ಸಂಬಂಧ ಕೇಂದ್ರ ಹಣಕಾಸು ಸಚಿವಾಲಯದ ಮೂಲಕ ಯುಎಇ ಕಾನ್ಸುಲೇಟ್ ಜನರಲ್ ಜಮಾಲ್ ಅಲ್ ಜಬಿ ಮತ್ತು ರಷಿದ್ ಖಮಿಸ್ ಅಲಿ ಅವರಿಗೂ ನೋಟಿಸ್ ಜಾರಿಯಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>