ತಿರುವನಂತಪುರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಸಮೀಪ ಶ್ರೀಕಾರ್ಯಮ್ ಎಂಬ ಸ್ಥಳದಲ್ಲಿದ್ದ ಬಸ್ ನಿಲ್ದಾಣದಲ್ಲಿ ಹುಡುಗ-ಹುಡುಗಿಯರು ಜೊತೆಯಾಗಿ ಕೂರುತ್ತಾರೆ ಎಂಬ ಕಾರಣಕ್ಕೆ ಸೀಟುಗಳನ್ನು ಒಡೆದು ಪ್ರತ್ಯೇಕಿಸಲಾಗಿತ್ತು. ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ಒಬ್ಬರ ಮೇಲೆ ಒಬ್ಬರು ಕುಳಿತು ಪ್ರತಿಭಟಿಸಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆಯ ಫೋಟೊ ವೈರಲ್ ಆಗಿತ್ತು.