ಪ್ರಶ್ನೋತ್ತರ ಅವಧಿಯಲ್ಲಿ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಶಾಸಕರ ವಿರುದ್ಧ ದಾಖಲಾಗಿರುವ ಜಾಮೀನು ರಹಿತ ಪ್ರಕರಣದ ಬಗ್ಗೆ ವಿಷಯ ಪ್ರಸ್ತಾಪಿಸಿದರು. ಆದರೆ, ಇದರ ಚರ್ಚೆಗೆ ಸ್ವೀಕರ್ ಅವಕಾಶ ನೀಡಲಿಲ್ಲ. ಆಗ ವಿಪಕ್ಷಗಳ ಸದಸ್ಯರು ಪ್ರತಿಭಟನೆ ಆರಂಭಿಸಿದರು. ಸ್ಪೀಕರ್ ನಿರ್ಧಾರ ವಿರೋಧಿಸಿ ವಿಪಕ್ಷಗಳ ಶಾಸಕರು, ಸ್ಪೀಕರ್ ಪೀಠದ ಮುಂದಿನ ಆವರಣಕ್ಕೆ ಇಳಿದು ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿದರು. ಇದರಿಂದ ಸ್ಪೀಕರ್ ದಿನದ ಮಟ್ಟಿಗೆ ಕಲಾಪ ಮುಂದೂಡಿದರು.