<p><strong>ತಿರುವನಂತಪುರ:</strong> ಚಿನ್ನ ಹಾಗೂ ಡಾಲರ್ ಕಳ್ಳಸಾಗಣೆ ಹಗರಣಗಳಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪಾತ್ರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ.</p>.<p>ತಿರುವನಂತಪುರದ ಶಂಕುಮುಖಂ ಬೀಚ್ನಲ್ಲಿ ಭಾನುವಾರ ನಡೆದ ಬಿಜೆಪಿ 'ವಿಜಯ ಯಾತ್ರೆ' ಸಮಾರೋಪ ಸಮಾರಂಭದಲ್ಲಿ ಪಿಣರಾಯಿ ವಿಜಯನ್ ವಿರುದ್ಧ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಪ್ರಮುಖ ಆರೋಪಿಗಳು ಸಿಎಂ ಕಚೇರಿಯಲ್ಲಿ ಕೆಲಸ ಮಾಡಿದ್ದಾರೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ಸವಾಲು ಹಾಕಿದರು.</p>.<p>ಈ ಮೊದಲು ಕೇಂದ್ರ ತನಿಖಾ ಏಜೆನ್ಸಿಗಳನ್ನು ಬಿಜೆಪಿ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಪಿಣರಾಯಿ ವಿಜಯನ್ ಆರೋಪ ಮಾಡಿದ್ದರು.</p>.<p>ಇದರ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ತಾವು ಕೂಡಾ ಈ ಪ್ರಕರಣಗಳಲ್ಲಿ ಸಿಎಂ ಕಚೇರಿಯು ಕಸ್ಟಮ್ಸ್ ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದೆಯೇ ಎಂಬುದನ್ನು ತಿಳಿಯಲು ಬಯಸುವುದಾಗಿ ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/amit-shah-exudes-confidence-of-nda-coalition-government-in-tn-post-apr-6-polls-811328.html" itemprop="url">ತಮಿಳುನಾಡಿನಲ್ಲಿ ಎನ್ಡಿಎ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ: ಅಮಿತ್ ಶಾ </a></p>.<p>ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಕೇಂದ್ರ ಏಜೆನ್ಸಿಗಳನ್ನು ರಾಜಕೀಯ ಸಾಧನವಾಗಿ ಬಳಕೆ ಮಾಡುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಆರೋಪಿಸುತ್ತಿದ್ದಾರೆ. ನಾನು ಕೂಡಾ ಕೆಲವು ಪ್ರಶ್ನೆಗಳನ್ನು ಕೇಳಲು ಬಯಸುತ್ತೇನೆ. ಡಾಲರ್/ಚಿನ್ನ ಹಗರಣದ ಪ್ರಮುಖ ಆರೋಪಿಯು ಅವರ ಕಚೇರಿಯಲ್ಲಿ ಕೆಲಸ ಮಾಡಿದ್ದಾರೆಯೇ ಇಲ್ಲವೋ? ಎಂದು ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸ್ವಪ್ನಾ ಸುರೇಶ್ ಅವರನ್ನು ಉಲ್ಲೇಖಿಸುತ್ತಾ ಹೇಳಿದರು.</p>.<p>ಕೇರಳವು ಅಭಿವೃದ್ಧಿ, ಸಾಕ್ಷರತೆ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸಲು ಹೆಸರುವಾಸಿಯಾಗಿತ್ತು. ಆದರೆ ಎಲ್ಡಿಎಫ್ ಹಾಗೂ ಯುಡಿಎಫ್ ಬದಲಾದ ಸರ್ಕಾರಗಳು ಅಧಿಕಾರಕ್ಕೆ ಬಂದ ಬಳಿಕ ರಾಜಕೀಯ ಹಿಂಸಾಚಾರದ ವೇದಿಕೆಯಾಗಿ ಬದಲಾಗಿದೆ ಎಂದು ಆರೋಪಿಸಿದರು.</p>.<p>ಕೇರಳದಲ್ಲಿ ವಿಧಾನಸಭಾ ಚುನಾವಣೆಯು ಒಂದೇ ಹಂತದಲ್ಲಿ ಏಪ್ರಿಲ್ 6ರಂದು ನಡೆಯಲಿದೆ. ಹಾಗೆಯೇ ಮೇ 2ರಂದು ಮತ ಏಣಿಕೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.</p>.<p><strong>ಕೇರಳದಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಪ್ರವಾಸ<br />ತಿರುವನಂತಪುರ:</strong> ಕೇರಳ ಬಿಜೆಪಿ ಸಹ ಪ್ರಭಾರಿಯೂ ಆಗಿರುವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಭಾನುವಾರ ಕೇರಳದಲ್ಲಿ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.</p>.<p>ದಿನಪೂರ್ತಿ ವಿವಿಧ ಗಣ್ಯರು ಹಾಗೂ ಧರ್ಮ ಗುರುಗಳನ್ನು ಭೇಟಿಯಾದ ಅವರು, ಮುಖ್ಯವಾಗಿ ಬಿಜೆಪಿ ಮುಖಂಡರು ಹಾಗೂ ಮೆಟ್ರೋಮನ್ ಇ. ಶ್ರೀಧರನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ರಾಜ್ಯದಲ್ಲಿ ಪ್ರಚಾರ, ಕಾರ್ಯಕ್ರಮಗಳು, ಸಭೆಗಳ ಬಗ್ಗೆ ಡಿಸಿಎಂ ಅವರು ಶ್ರೀಧರನ್ ಜತೆ ಚರ್ಚೆ ನಡೆಸಿದರು.</p>.<p><strong>ನಾರಾಯಣ ಗುರುವಿಗೆ ಗೌರವ:</strong> ತಿರುವನಂತಪುರ ಜಿಲ್ಲೆಯ ವರ್ಕಾಲದಲ್ಲಿರುವ ಶ್ರೀ ನಾರಾಯಣ ಗುರು ಅವರ ಸಮಾಧಿ ಇರುವ ಶಿವಗಿರಿ ಮಠ ಮತ್ತು ಸಮೀಪದ ಕಾರ್ಡಿನಲ್ ಕ್ಲೀಮಿಸ್ ಎಮಿನೆನ್ಸ್ ಮಲಂಕರ ಚರ್ಚ್ಗೆ ಭೇಟಿ ನೀಡಿದರು.<br />ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡುತ್ತಾ, ‘ಕೇರಳದ ಜನರು ಪ್ರಗತಿಯನ್ನು ಬಯಸುತ್ತಾರೆ. ಇಲ್ಲಿ ಬಿಜೆಪಿ ಪರ ಅಲೆ ಬೀಸುತ್ತಿದೆ. ಎಲ್ಡಿಎಫ್ ಹಾಗೂ ಯುಡಿಎಫ್ ಆಡಳಿತದಿಂದ ಜನರು ಬೇಸತ್ತಿದ್ದಾರೆ’ ಎಂದರು.</p>.<p>ಸಂಜೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಚಿನ್ನ ಹಾಗೂ ಡಾಲರ್ ಕಳ್ಳಸಾಗಣೆ ಹಗರಣಗಳಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪಾತ್ರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ.</p>.<p>ತಿರುವನಂತಪುರದ ಶಂಕುಮುಖಂ ಬೀಚ್ನಲ್ಲಿ ಭಾನುವಾರ ನಡೆದ ಬಿಜೆಪಿ 'ವಿಜಯ ಯಾತ್ರೆ' ಸಮಾರೋಪ ಸಮಾರಂಭದಲ್ಲಿ ಪಿಣರಾಯಿ ವಿಜಯನ್ ವಿರುದ್ಧ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಪ್ರಮುಖ ಆರೋಪಿಗಳು ಸಿಎಂ ಕಚೇರಿಯಲ್ಲಿ ಕೆಲಸ ಮಾಡಿದ್ದಾರೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ಸವಾಲು ಹಾಕಿದರು.</p>.<p>ಈ ಮೊದಲು ಕೇಂದ್ರ ತನಿಖಾ ಏಜೆನ್ಸಿಗಳನ್ನು ಬಿಜೆಪಿ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಪಿಣರಾಯಿ ವಿಜಯನ್ ಆರೋಪ ಮಾಡಿದ್ದರು.</p>.<p>ಇದರ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ತಾವು ಕೂಡಾ ಈ ಪ್ರಕರಣಗಳಲ್ಲಿ ಸಿಎಂ ಕಚೇರಿಯು ಕಸ್ಟಮ್ಸ್ ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದೆಯೇ ಎಂಬುದನ್ನು ತಿಳಿಯಲು ಬಯಸುವುದಾಗಿ ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/amit-shah-exudes-confidence-of-nda-coalition-government-in-tn-post-apr-6-polls-811328.html" itemprop="url">ತಮಿಳುನಾಡಿನಲ್ಲಿ ಎನ್ಡಿಎ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ: ಅಮಿತ್ ಶಾ </a></p>.<p>ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಕೇಂದ್ರ ಏಜೆನ್ಸಿಗಳನ್ನು ರಾಜಕೀಯ ಸಾಧನವಾಗಿ ಬಳಕೆ ಮಾಡುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಆರೋಪಿಸುತ್ತಿದ್ದಾರೆ. ನಾನು ಕೂಡಾ ಕೆಲವು ಪ್ರಶ್ನೆಗಳನ್ನು ಕೇಳಲು ಬಯಸುತ್ತೇನೆ. ಡಾಲರ್/ಚಿನ್ನ ಹಗರಣದ ಪ್ರಮುಖ ಆರೋಪಿಯು ಅವರ ಕಚೇರಿಯಲ್ಲಿ ಕೆಲಸ ಮಾಡಿದ್ದಾರೆಯೇ ಇಲ್ಲವೋ? ಎಂದು ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸ್ವಪ್ನಾ ಸುರೇಶ್ ಅವರನ್ನು ಉಲ್ಲೇಖಿಸುತ್ತಾ ಹೇಳಿದರು.</p>.<p>ಕೇರಳವು ಅಭಿವೃದ್ಧಿ, ಸಾಕ್ಷರತೆ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸಲು ಹೆಸರುವಾಸಿಯಾಗಿತ್ತು. ಆದರೆ ಎಲ್ಡಿಎಫ್ ಹಾಗೂ ಯುಡಿಎಫ್ ಬದಲಾದ ಸರ್ಕಾರಗಳು ಅಧಿಕಾರಕ್ಕೆ ಬಂದ ಬಳಿಕ ರಾಜಕೀಯ ಹಿಂಸಾಚಾರದ ವೇದಿಕೆಯಾಗಿ ಬದಲಾಗಿದೆ ಎಂದು ಆರೋಪಿಸಿದರು.</p>.<p>ಕೇರಳದಲ್ಲಿ ವಿಧಾನಸಭಾ ಚುನಾವಣೆಯು ಒಂದೇ ಹಂತದಲ್ಲಿ ಏಪ್ರಿಲ್ 6ರಂದು ನಡೆಯಲಿದೆ. ಹಾಗೆಯೇ ಮೇ 2ರಂದು ಮತ ಏಣಿಕೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.</p>.<p><strong>ಕೇರಳದಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಪ್ರವಾಸ<br />ತಿರುವನಂತಪುರ:</strong> ಕೇರಳ ಬಿಜೆಪಿ ಸಹ ಪ್ರಭಾರಿಯೂ ಆಗಿರುವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಭಾನುವಾರ ಕೇರಳದಲ್ಲಿ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.</p>.<p>ದಿನಪೂರ್ತಿ ವಿವಿಧ ಗಣ್ಯರು ಹಾಗೂ ಧರ್ಮ ಗುರುಗಳನ್ನು ಭೇಟಿಯಾದ ಅವರು, ಮುಖ್ಯವಾಗಿ ಬಿಜೆಪಿ ಮುಖಂಡರು ಹಾಗೂ ಮೆಟ್ರೋಮನ್ ಇ. ಶ್ರೀಧರನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ರಾಜ್ಯದಲ್ಲಿ ಪ್ರಚಾರ, ಕಾರ್ಯಕ್ರಮಗಳು, ಸಭೆಗಳ ಬಗ್ಗೆ ಡಿಸಿಎಂ ಅವರು ಶ್ರೀಧರನ್ ಜತೆ ಚರ್ಚೆ ನಡೆಸಿದರು.</p>.<p><strong>ನಾರಾಯಣ ಗುರುವಿಗೆ ಗೌರವ:</strong> ತಿರುವನಂತಪುರ ಜಿಲ್ಲೆಯ ವರ್ಕಾಲದಲ್ಲಿರುವ ಶ್ರೀ ನಾರಾಯಣ ಗುರು ಅವರ ಸಮಾಧಿ ಇರುವ ಶಿವಗಿರಿ ಮಠ ಮತ್ತು ಸಮೀಪದ ಕಾರ್ಡಿನಲ್ ಕ್ಲೀಮಿಸ್ ಎಮಿನೆನ್ಸ್ ಮಲಂಕರ ಚರ್ಚ್ಗೆ ಭೇಟಿ ನೀಡಿದರು.<br />ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡುತ್ತಾ, ‘ಕೇರಳದ ಜನರು ಪ್ರಗತಿಯನ್ನು ಬಯಸುತ್ತಾರೆ. ಇಲ್ಲಿ ಬಿಜೆಪಿ ಪರ ಅಲೆ ಬೀಸುತ್ತಿದೆ. ಎಲ್ಡಿಎಫ್ ಹಾಗೂ ಯುಡಿಎಫ್ ಆಡಳಿತದಿಂದ ಜನರು ಬೇಸತ್ತಿದ್ದಾರೆ’ ಎಂದರು.</p>.<p>ಸಂಜೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>