ಕೋವಿಡ್ 19 ಸಾಂಕ್ರಾಮಿಕದ ಮೊದಲ ಅಲೆ, ದೇಶದ ಆರ್ಥಿಕತೆಯನ್ನು ದುರ್ಬಲಗೊಳಿಸಿದೆ. ಈಗ ದೇಶವು ಎರಡನೇ ಅಲೆಯನ್ನು ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಲಸಿಕೆ ನೀಡುವುದನ್ನು ವೇಗಗೊಳಿಸಿದರೆ, ದೇಶದ ಆರ್ಥಿಕತೆಯ ಸುಧಾರಣೆಗೆ ಸಹಾಯವಾಗುತ್ತದೆ‘ ಎಂದು ಅವರು ಅಭಿಪ್ರಾಯಪಟ್ಟರು. ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಮತ್ತು ಸಮಾಜದ ಎಲ್ಲ ವರ್ಗದವರಿಗೂ ಲಸಿಕೆ ನೀಡುವುದಕ್ಕಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.