ಈ ನಿರ್ಣಯವನ್ನು ಅಂಗೀಕರಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, 'ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯ ವಿಶೇಷ ಉದ್ದೇಶದ ಘಟಕದಲ್ಲಿ (ಸ್ಪೆಷಲ್ ಪರ್ಪಸ್ ವೆಹಿಕಲ್– ಎಸ್ಪಿವಿ) ರಾಜ್ಯ ಸರ್ಕಾರದ ಪಾಲೂ ಇದ್ದು, ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಹೇಳಿದರು.