ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಮುಖ್ಯಮಂತ್ರಿ ಕಾರ್ಯಾಲಯ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಕಣ್ಣೂರ್ನ ಸ್ವಗ್ರಾಮದಲ್ಲಿ ಪಿಣರಾಯಿ ವಿಜಯನ್ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಅವರಿಗೆ ಸೋಂಕು ಲಕ್ಷಣಗಳು ಕಂಡು ಬಂದಿಲ್ಲ, ಅವರನ್ನು ಕೋಯಿಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆತರಲಾಗುತ್ತದೆ ಎಂದು ಸಿಎಂ ಕಾರ್ಯಾಲಯ ಪ್ರಕಟಿಸಿದೆ.
The Chief Minister has tested Covid +ve. He will be treated at the Government Medical College, Kozhikkode. Those who have been in contact with him recently should go into self observation.
ಮಾರ್ಚ್ 3ರಂದು ಸಿಎಂ ಪಿಣರಾಯಿ ವಿಜಯನ್ ಕೋವಿಡ್ ಲಸಿಕೆಯ ಮೊದಲ ಡೋಸ್ ತೆಗೆದುಕೊಂಡಿದ್ದರು.
'ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಕೋಯಿಕೋಡ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದಿದ್ದವರು ಪರೀಕ್ಷೆಗೆ ಒಳಗಾಗಿ' ಎಂದು ಸಿಎಂ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
I have been confirmed Covid +ve. Will get treated at the Government Medical College, Kozhikkode. Request those who have been in contact with me recently to go into self observation.