ಕೊಚ್ಚಿ: ಕೊಚ್ಚಿ–ಮಂಗಳೂರು ನಡುವೆ ನೈಸರ್ಗಿಕ ಅನಿಲ ಪೈಪ್ಲೈನ್ ಪೂರ್ಣಗೊಂಡಿರುವುದನ್ನು ಶ್ಲಾಘಿಸಿದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ಇದು ನಮ್ಮ ಸರ್ಕಾರದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಲ್ಲಿ ಪ್ರಮುಖವಾಗಿತ್ತು. ಇದರ ಯಶಸ್ಸು, ದಕ್ಷಿಣ ರಾಜ್ಯದಲ್ಲಿ ಉದ್ಯಮವನ್ನು ಹೇಗೆ ನಡೆಸಲಾಗುತ್ತದೆ ಎನ್ನುವುದಕ್ಕೆ ಇರುವ ಸಾಕ್ಷ್ಯ’ ಎಂದಿದ್ದಾರೆ.