ಕೋವಿಡ್ ತಡೆಗೆ ಕೈಗೊಳ್ಳಲಾಗಿರುವ ಕ್ರಮಗಳಿಗೆ ಸಹಕರಿಸದವರಿಗೆ ಉಚಿತ ಚಿಕಿತ್ಸೆ ನೀಡುವುದಿಲ್ಲ. ಲಸಿಕೆ ಪಡೆದುಕೊಳ್ಳದ ಶಿಕ್ಷಕರು ಮತ್ತು ಉದ್ಯೋಗಿಗಳು ಕಚೇರಿಗೆ ಹಾಜರಾಗಿ ಕೆಲಸ ಮಾಡುತ್ತಿದ್ದರೆ ಅಥವಾ ಸಾರ್ವಜನಿಕರೊಂದಿಗೆ ಬೆರೆಯುತ್ತಿದ್ದರೆ ಕಡ್ಡಾಯವಾಗಿ ಪ್ರತಿ ವಾರ ಆರ್ಟಿ–ಪಿಸಿಆರ್ ಪರೀಕ್ಷೆ ಮಾಡಿ ವರದಿ ಸಲ್ಲಿಸಬೇಕು. ಈ ಪರೀಕ್ಷೆಗೆ ಹಣವನ್ನು ಅವರೇ ಪಾವತಿಸಬೇಕು. ಎಲ್ಲರ ಸುರಕ್ಷತೆಗಾಗಿ ಈ ಕ್ರಮ ಎಂದು ಪಿಣರಾಯಿ ವಿಜಯನ್ ಹೇಳಿರುವುದಾಗಿ ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.