ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19: ಕೇರಳ ಸಿಎಂ ಪಿಣರಾಯಿ ವಿಜಯನ್ ಗುಣಮುಖ

Last Updated 15 ಏಪ್ರಿಲ್ 2021, 5:46 IST
ಅಕ್ಷರ ಗಾತ್ರ

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಕೋವಿಡ್-19ನಿಂದ ಚೇತರಿಸಿಕೊಂಡಿದ್ದು, ಕೋಯಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.ಏಪ್ರಿಲ್‌ 8ರಂದು ಅವರಿಗೆ ಸೋಂಕುದೃಢಪಟ್ಟಿತ್ತು.

ಆಸ್ಪತ್ರೆಗೆ ದಾಖಲಾದಏಳು ದಿನಗಳ ಬಳಿಕವಿಜಯನ್‌ ಅವರಿಗೆ ಕೋವಿಡ್‌ ನೆಗೆಟಿವ್‌ ವರದಿ ಬಂದಿದ್ದು, ಬುಧವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಜಯನ್, ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿಮಾರ್ಚ್‌3 ರಂದು ಲಸಿಕೆ ಹಾಕಿಸಿಕೊಂಡಿದ್ದರು. ಆದರೆ, ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿಪ್ರಚಾರದ ಸಲುವಾಗಿ ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದರು. ಏಪ್ರಿಲ್‌6 ರಂದು ಮತದಾನ ನಡೆದಿದ್ದು, ಫಲಿತಾಂಶ ಮೇ 2ರಂದು ಹೊರಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT