‘ಪ್ರಸ್ತಾವಿತ ಸ್ತಬ್ಧಚಿತ್ರವು ಪ್ರಬಲ ಸಾಮಾಜಿಕ ಸಂದೇಶವನ್ನು ಒಳಗೊಂಡಿದೆ. ಸಮಕಾಲೀನ ಸಾಮಾಜಿಕ ಸನ್ನಿವೇಶದಲ್ಲಿ ಹೆಚ್ಚು ಪ್ರಸ್ತುತವಾಗಿದೆ. ಕೇರಳದ ನವೋದಯ ಚಳವಳಿಯ ನೇತೃತ್ವ ವಹಿಸಿದ್ದ ಶ್ರೀ ನಾರಾಯಣ ಗುರುಗಳ ಚಿಂತನೆಗಳು ವಿಶ್ವದಾದ್ಯಂತ ಗಮನ ಸೆಳೆದಿದ್ದವು. ಇದರ ಚಿತ್ರಣ ಸ್ತಬ್ಧಚಿತ್ರದಲ್ಲಿ ಅಡಕಗೊಂಡಿದೆ. ಹೀಗಾಗಿ ಸ್ತಬ್ಧಚಿತ್ರವು ಯುವ ಪೀಳಿಗೆಗೆ ಅಮೂಲ್ಯ ಸಂದೇಶವನ್ನು ಸಾರಲಿದೆ’ ಎಂದು ಮೋದಿಗೆ ಬರೆದ ಪತ್ರದಲ್ಲಿ ಪಿಣರಾಯಿ ಉಲ್ಲೇಖಿಸಿದ್ದಾರೆ.