ಬೆಂಗಳೂರು: ಅಖಿಲ ಭಾರತ ಸೇವೆಯಲ್ಲಿನ ಅಧಿಕಾರಿಗಳ ನಿಯೋಜನೆಗೆ ಸಂಬಂಧಿಸಿದಂತೆ ಪ್ರಸ್ತಾವಿತ ಹೊಸ ತಿದ್ದುಪಡಿಯನ್ನು ಕೈಬಿಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರ ಬರೆದಿದ್ದಾರೆ.
ಹೊಸ ಪ್ರಸ್ತಾವಿತ ತಿದ್ದುಪಡಿಯಿಂದ ಐಎಎಸ್ ಸೇರಬಯಸುವ ಮತ್ತು ಈಗಾಗಲೇ ಸೇವೆಯಲ್ಲಿರುವ ಅಧಿಕಾರಿಗಳಲ್ಲಿ ಭಯ ಉಂಟಾಗಲಿದೆ. ಅಲ್ಲದೆ, ಐಎಎಸ್ ಸೇರ ಬಯಸುವವರು ಕೂಡ ಹಿಂಜರಿಯುವಂತಾಗಿದೆ ಎಂದು ವಿಜಯನ್ ಹೇಳಿದ್ದಾರೆ.
ಈಗಾಗಲೇ ಜಾರಿಯಲ್ಲಿರುವ ಅಧಿಕಾರಿಗಳ ನಿಯೋಜನೆಗೆ ಸಂಬಂಧಿಸಿದ ಕೇಂದ್ರದ ನಿಯಮದಲ್ಲಿ ಕೂಡ ಸರ್ಕಾರಕ್ಕೆ ಹೆಚ್ಚಿನ ನಿಯಂತ್ರಣವಿದೆ. ಹೀಗಾಗಿ ಮತ್ತೊಂದು ತಿದ್ದುಪಡಿ ಅಗತ್ಯವಿಲ್ಲ ಎಂದು ವಿಜಯನ್ ಪತ್ರದಲ್ಲಿ ತಿಳಿಸಿದ್ದಾರೆ.