ತಲಶ್ಶೇರಿ–ಮೈಸೂರು ಹಾಗೂ ನಿಲಂಬೂರು–ನಂಜನಗೂಡು ರೈಲ್ವೆ ಯೋಜನೆಯ ಅನುಷ್ಠಾನದ ಕುರಿತು ಉಭಯ ನಾಯಕರು ಚರ್ಚಿಸುವ ನಿರೀಕ್ಷೆ ಇದೆ. ತಿರುವನಂತಪುರ–ಕಾಸರಗೋಡು ಸೆಮಿ ಹೈ–ಸ್ಪೀಡ್ ರೈಲು ಮಾರ್ಗ ಹಾಗೂ ಸಿಲ್ವರ್ ಮಾರ್ಗವನ್ನು ಮಂಗಳೂರಿನವರೆಗೂ ವಿಸ್ತರಿಸುವ ಸಂಬಂಧ ಕೇರಳ ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿದ್ದು, ಈ ಕುರಿತೂ ಚರ್ಚೆ ನಡೆಸುವ ಸಾಧ್ಯತೆ ಇದೆ.