ಚಿತ್ರ ಪ್ರದರ್ಶನ ವಿರೋಧಿಸಿ ಪ್ರತಿಭಟನೆ ನಡೆಸಲು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮುಂದಾಗಿದ್ದರು. ಆದರೆ, ಭಾರಿ ಪ್ರಮಾಣದಲ್ಲಿ ಜನರು ಸೇರಿದ್ದರಿಂದ, ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿದರು ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ. ಸಾಕ್ಷ್ಯಚಿತ್ರ ಹೆಚ್ಚು ಜನರನ್ನು ತಲುಪಬೇಕು ಎಂಬ ಉದ್ದೇಶದಿಂದ ಕಡಲತೀರದಲ್ಲಿ ಪ್ರದರ್ಶನ ಆಯೋಜಿಸಲಾಗಿತ್ತು ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಬಾಬು ಅವರು ಹೇಳಿದ್ದಾರೆ.