<p><strong>ತಿರುವನಂತಪುರ</strong>: ಕೇರಳದಲ್ಲಿ ಕೊರೊನಾ ಪ್ರಸರಣವನ್ನು ತಡೆಯಲು ನಿರ್ಬಂಧಗಳನ್ನು ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಜನರು ‘ಬಲಿ ತರ್ಪಣಂ’ ವಿಧಿಯನ್ನು ಭಾನುವಾರ ಮನೆಯಲ್ಲೇ ಆಚರಿಸಿದರು.</p>.<p>ಪೂರ್ವಜರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ‘ಕರ್ಕೀಡಕ ವಾವು’ ದಿನದಂದು ‘ಬಲಿ ತರ್ಪಣಂ’ ವಿಧಿಯನ್ನು ನೆರವೇರಿಸಲಾಗುತ್ತದೆ. ಈ ವಿಧಿಯನ್ನು ಸಾಮಾನ್ಯವಾಗಿ ಸಮುದ್ರ ಅಥವಾ ನದಿ ತೀರದಲ್ಲಿ ಆಚರಿಸಲಾಗುತ್ತದೆ.</p>.<p>ಕೇರಳದ ಎರ್ನಾಕುಲಂ ಜಿಲ್ಲೆಯ ಪೆರಿಯಾರ್ ನದಿಯ ದಂಡೆಯಲ್ಲಿರುವ ಆಲುವದಲ್ಲಿರುವ 'ಶಿವರಾತ್ರಿ ಮಣಪ್ಪುರಂ' ಮತ್ತು ತಿರುವಲ್ಲಂ ಪರಶುರಾಮ ದೇವಸ್ಥಾನ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಈ ವಿಧಿಯನ್ನು ನೆರವೇರಿಸಲಾಗುತ್ತದೆ. ಆದರೆ ಈ ಬಾರಿ ಕೋವಿಡ್ ನಿರ್ಬಂಧಗಳಿಂದಾಗಿ ದೇವಸ್ಥಾನಗಳು ನಿರ್ಜನವಾಗಿದ್ದವು.</p>.<p>ಈ ‘ಕರ್ಕೀಡಕ ವಾವು’ ನಿಮಿತ್ತ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸುವಂತೆ ಬಿಜೆಪಿಯು ಕೇರಳ ಸರ್ಕಾರವನ್ನು ಒತ್ತಾಯಿಸಿತ್ತು. ಆದರೆ ಇತ್ತೀಚೆಗೆ ಆರು ದಿನಗಳ ಕಾಲ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸಿ ಅಂಗಡಿ ಮುಗ್ಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿತ್ತು. ಹಾಗಾಗಿ ಭಾನುವಾರ ಲಾಕ್ಡೌನ್ ನಿಯಮಗಳನ್ನು ಮುಂದುವರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳದಲ್ಲಿ ಕೊರೊನಾ ಪ್ರಸರಣವನ್ನು ತಡೆಯಲು ನಿರ್ಬಂಧಗಳನ್ನು ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಜನರು ‘ಬಲಿ ತರ್ಪಣಂ’ ವಿಧಿಯನ್ನು ಭಾನುವಾರ ಮನೆಯಲ್ಲೇ ಆಚರಿಸಿದರು.</p>.<p>ಪೂರ್ವಜರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ‘ಕರ್ಕೀಡಕ ವಾವು’ ದಿನದಂದು ‘ಬಲಿ ತರ್ಪಣಂ’ ವಿಧಿಯನ್ನು ನೆರವೇರಿಸಲಾಗುತ್ತದೆ. ಈ ವಿಧಿಯನ್ನು ಸಾಮಾನ್ಯವಾಗಿ ಸಮುದ್ರ ಅಥವಾ ನದಿ ತೀರದಲ್ಲಿ ಆಚರಿಸಲಾಗುತ್ತದೆ.</p>.<p>ಕೇರಳದ ಎರ್ನಾಕುಲಂ ಜಿಲ್ಲೆಯ ಪೆರಿಯಾರ್ ನದಿಯ ದಂಡೆಯಲ್ಲಿರುವ ಆಲುವದಲ್ಲಿರುವ 'ಶಿವರಾತ್ರಿ ಮಣಪ್ಪುರಂ' ಮತ್ತು ತಿರುವಲ್ಲಂ ಪರಶುರಾಮ ದೇವಸ್ಥಾನ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಈ ವಿಧಿಯನ್ನು ನೆರವೇರಿಸಲಾಗುತ್ತದೆ. ಆದರೆ ಈ ಬಾರಿ ಕೋವಿಡ್ ನಿರ್ಬಂಧಗಳಿಂದಾಗಿ ದೇವಸ್ಥಾನಗಳು ನಿರ್ಜನವಾಗಿದ್ದವು.</p>.<p>ಈ ‘ಕರ್ಕೀಡಕ ವಾವು’ ನಿಮಿತ್ತ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸುವಂತೆ ಬಿಜೆಪಿಯು ಕೇರಳ ಸರ್ಕಾರವನ್ನು ಒತ್ತಾಯಿಸಿತ್ತು. ಆದರೆ ಇತ್ತೀಚೆಗೆ ಆರು ದಿನಗಳ ಕಾಲ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸಿ ಅಂಗಡಿ ಮುಗ್ಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿತ್ತು. ಹಾಗಾಗಿ ಭಾನುವಾರ ಲಾಕ್ಡೌನ್ ನಿಯಮಗಳನ್ನು ಮುಂದುವರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>