<p><strong>ತಿರುವನಂತಪುರ (ಕೇರಳ):</strong> ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತಂತೆ ಸುಪ್ರೀಂಕೋರ್ಟ್ಗೆ ತಾನು ಸಲ್ಲಿಸಿರುವ ಪ್ರಮಾಣಪತ್ರಕ್ಕೆ ಬದ್ಧ ಇರುವುದಾಗಿ ಸಿಪಿಎಂ ಸೋಮವಾರ ಸ್ಪಷ್ಟಪಡಿಸಿದೆ. ಇದಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ತೀಕ್ಷ್ಣ ಪ್ರತಿಕ್ರಿಯೆ ನೀಡಿವೆ.</p>.<p>‘ಈ ವಿಷಯದ ಬಗ್ಗೆ ಎಲ್ಡಿಎಫ್ ಸರ್ಕಾರ ತನ್ನ ಮೂಲ ಅರ್ಜಿಯಲ್ಲಿ ತೆಗೆದುಕೊಂಡಿರುವ ನಿಲುವಿಗೆ ಬದ್ಧವಾಗಿದ್ದು, ಅದನ್ನು ಮುಂದುವರಿಸಲಾಗುವುದು’ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಕಾನಂ ರಾಜೇಂದ್ರನ್ ತಿಳಿಸಿದ್ದಾರೆ.</p>.<p>ಮತ್ತೊಂದೆಡೆ, ಚುನಾವಣಾ ಸಮಯದಲ್ಲಿ ಶಬರಿಮಲೆ ಘಟನೆಯನ್ನು ಚರ್ಚೆಯ ವಿಷಯವನ್ನಾಗಿ ಮಾಡಲು ಕೆಲವರು ಉದ್ದೇಶಪೂರ್ವಕ ಪ್ರಯತ್ನಿಸಿದ್ದಾರೆ ಎಂದು ಸಿಪಿಎಂ ಹೇಳಿದೆ.</p>.<p>ಸರ್ಕಾರದ ಪ್ರಮಾಣಪತ್ರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿರುವ ರಾಜೇಂದ್ರನ್ ಅವರ ನಿಲುವಿಗೆ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ‘ಪವಿತ್ರ ಭೂಮಿಯನ್ನು ಮತ್ತೆ ಗಲಭೆಯ ಸ್ಥಳವನ್ನಾಗಿ ಸರ್ಕಾರ ಮಾಡಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ಹೇಳಿದ್ದಾರೆ.</p>.<p>‘ರಾಜೇಂದ್ರನ್ ಅವರ ಹೇಳಿಕೆಯು ಮಾರ್ಕ್ಸ್ವಾದಿ ಸರ್ಕಾರದ ಅಪ್ರಾಮಾಣಿಕ ನಡೆಯನ್ನು ಬಹಿರಂಗಪಡಿಸಿದೆ’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುರಳೀಧರನ್ ಅವರು ಹೇಳಿದರು. ಸರ್ಕಾರಕ್ಕೆ ಭಕ್ತರ ಮತಗಳು ಬೇಕೇ ಹೊರತು ತನ್ನ ನಿರ್ಧಾರದಲ್ಲಿ ಬದಲಾವಣೆ ಮಾಡಲು ಅದು ಸಿದ್ಧವಿಲ್ಲ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ (ಕೇರಳ):</strong> ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತಂತೆ ಸುಪ್ರೀಂಕೋರ್ಟ್ಗೆ ತಾನು ಸಲ್ಲಿಸಿರುವ ಪ್ರಮಾಣಪತ್ರಕ್ಕೆ ಬದ್ಧ ಇರುವುದಾಗಿ ಸಿಪಿಎಂ ಸೋಮವಾರ ಸ್ಪಷ್ಟಪಡಿಸಿದೆ. ಇದಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ತೀಕ್ಷ್ಣ ಪ್ರತಿಕ್ರಿಯೆ ನೀಡಿವೆ.</p>.<p>‘ಈ ವಿಷಯದ ಬಗ್ಗೆ ಎಲ್ಡಿಎಫ್ ಸರ್ಕಾರ ತನ್ನ ಮೂಲ ಅರ್ಜಿಯಲ್ಲಿ ತೆಗೆದುಕೊಂಡಿರುವ ನಿಲುವಿಗೆ ಬದ್ಧವಾಗಿದ್ದು, ಅದನ್ನು ಮುಂದುವರಿಸಲಾಗುವುದು’ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಕಾನಂ ರಾಜೇಂದ್ರನ್ ತಿಳಿಸಿದ್ದಾರೆ.</p>.<p>ಮತ್ತೊಂದೆಡೆ, ಚುನಾವಣಾ ಸಮಯದಲ್ಲಿ ಶಬರಿಮಲೆ ಘಟನೆಯನ್ನು ಚರ್ಚೆಯ ವಿಷಯವನ್ನಾಗಿ ಮಾಡಲು ಕೆಲವರು ಉದ್ದೇಶಪೂರ್ವಕ ಪ್ರಯತ್ನಿಸಿದ್ದಾರೆ ಎಂದು ಸಿಪಿಎಂ ಹೇಳಿದೆ.</p>.<p>ಸರ್ಕಾರದ ಪ್ರಮಾಣಪತ್ರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿರುವ ರಾಜೇಂದ್ರನ್ ಅವರ ನಿಲುವಿಗೆ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ‘ಪವಿತ್ರ ಭೂಮಿಯನ್ನು ಮತ್ತೆ ಗಲಭೆಯ ಸ್ಥಳವನ್ನಾಗಿ ಸರ್ಕಾರ ಮಾಡಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ಹೇಳಿದ್ದಾರೆ.</p>.<p>‘ರಾಜೇಂದ್ರನ್ ಅವರ ಹೇಳಿಕೆಯು ಮಾರ್ಕ್ಸ್ವಾದಿ ಸರ್ಕಾರದ ಅಪ್ರಾಮಾಣಿಕ ನಡೆಯನ್ನು ಬಹಿರಂಗಪಡಿಸಿದೆ’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುರಳೀಧರನ್ ಅವರು ಹೇಳಿದರು. ಸರ್ಕಾರಕ್ಕೆ ಭಕ್ತರ ಮತಗಳು ಬೇಕೇ ಹೊರತು ತನ್ನ ನಿರ್ಧಾರದಲ್ಲಿ ಬದಲಾವಣೆ ಮಾಡಲು ಅದು ಸಿದ್ಧವಿಲ್ಲ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>