ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣ: ಆರೋಪಿ ಸ್ವಪ್ನಾ ಸುರೇಶ್ ಜೈಲಿನಿಂದ ಬಿಡುಗಡೆ

ತಿರುವನಂತಪುರ: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಯುಎಪಿಎ (ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ) ಅಡಿಯಲ್ಲಿ ಎನ್ಐಎ ದಾಖಲಿಸಿದ್ದ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ನವೆಂಬರ್ 2ರಂದು ಅವರಿಗೆ ಜಾಮೀನು ನೀಡಿತ್ತು.
₹25 ಲಕ್ಷ ಬಾಂಡ್ ಮತ್ತು ಇಬ್ಬರ ಶೂರಿಟಿ ಮೇಲೆ ಜಾಮೀನು ಮಂಜೂರು ಮಾಡಲಾಗಿತ್ತು.
Kerala | The prime accused in the Kerala gold smuggling case, Swapna Suresh released from jail today
Kerala High Court granted her bail on Nov 2 in the case registered by NIA under UAPA. Bail granted to her on a Rs 25 Lakhs bail bond and 2 solvent sureties pic.twitter.com/0OMBVtPuiV
— ANI (@ANI) November 6, 2021
ಸ್ವಪ್ನಾ ಸುರೇಶ್ ಜತೆಗೆ ಇತರ ಆರೋಪಿಗಳಾದ ಮೊಹಮ್ಮದ್ ಶಫಿ ಪಿ, ಜಲಾಲ್ ಎ.ಎಂ., ರಾಬಿನ್ಸ್ ಹಮೀದ್, ರಮೀಸ್ ಕೆ.ಟಿ., ಶರಫುದ್ದೀನ್ ಕೆ.ಟಿ., ಸರಿತಾ ಪಿ.ಎಸ್ ಮತ್ತು ಮೊಹಮ್ಮದ್ ಅಲಿ ಅವರಿಗೂ ಜಾಮೀನು ಸಿಕ್ಕಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.