<p><strong>ತಿರುವನಂತಪುರ:</strong> ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಶಾಮೀಲಾಗಿರುವ ಆರೋಪ ಎದುರಿಸುತ್ತಿರುವ ಹಾಗೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಾಜಿ ಮುಖ್ಯ ಕಾರ್ಯದರ್ಶಿ ಎಂ.ಶಿವಶಂಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ಅವರನ್ನು ತಿರುವನಂತಪುರದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಶನಿವಾರ ದಾಖಲಿಸಲಾಗಿದೆ.</p>.<p>ಸದ್ಯ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಸ್ಟಮ್ಸ್ ಅಧಿಕಾರಿಗಳು ಸಹ ಆಸ್ಪತ್ರೆಯಲ್ಲಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/india-news/kerala-cms-principal-secretary-removed-following-alleged-nexus-with-smuggling-racket-742871.html" target="_blank">ಚಿನ್ನ ಕಳ್ಳಸಾಗಾಣಿಕೆ ಆರೋಪ: ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರ್ಯದರ್ಶಿ ತಲೆದಂಡ</a></p>.<p>ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ವಿಚಾರಣೆಗೆ ಸಮನ್ಸ್ ಪಡೆದಿರುವ ಅವರನ್ನು ಅನಾರೋಗ್ಯದಿಂದಾಗಿ ಶುಕ್ರವಾರ ಸಂಜೆ ಪಿಆರ್ಎಸ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅಲ್ಲಿಂದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.</p>.<p>‘ಶಿವಶಂಕರ್ (57) ಅವರನ್ನು ಅಸೌಖ್ಯ, ಬೆನ್ನು ನೋವು ಹಾಗೂ ತಲೆಸುತ್ತುವಿಕೆ ಕಾರಣ ಅಕ್ಟೋಬರ್ 16ರಂದು ಸಂಜೆ 6 ಗಂಟೆಗೆ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕರೆತರುವ ವೇಳೆ ಅವರ ರಕ್ತದೊತ್ತಡ ಅತಿಯಾಗಿತ್ತು. ಇಸಿಜಿಯಲ್ಲಿ ಸಣ್ಣ ವ್ಯತ್ಯಾಸ ಕಂಡುಬಂದಿತ್ತು. ಅವರನ್ನು ಹೃದಯ ಚಿಕಿತ್ಸಾ ವಿಭಾಗದ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು’ ಎಂದು ಪಿಆರ್ಎಸ್ ಖಾಸಗಿ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/india-news/kerala-gold-smuggling-aimed-at-terror-funding-uae-consulate-documents-were-faked-nia-744828.html" target="_blank">ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಭಯೋತ್ಪಾದಕರಿಗೆ ನೆರವಾಗುವುದೇ ಗುರಿ ಎಂದ ಎನ್ಐಎ</a></p>.<p>ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಅಕ್ಟೋಬರ್ 23ರ ವರೆಗೂ ಶಿವಶಂಕರ್ ಅವರನ್ನು ಬಂಧಿಸಬಾರದು ಎಂದು ಜಾರಿ ನಿರ್ದೇಶನಾಲಯಕ್ಕೆ ಕೇರಳ ಹೈಕೋರ್ಟ್ ಗುರುವಾರ ನಿರ್ದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಶಾಮೀಲಾಗಿರುವ ಆರೋಪ ಎದುರಿಸುತ್ತಿರುವ ಹಾಗೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಾಜಿ ಮುಖ್ಯ ಕಾರ್ಯದರ್ಶಿ ಎಂ.ಶಿವಶಂಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ಅವರನ್ನು ತಿರುವನಂತಪುರದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಶನಿವಾರ ದಾಖಲಿಸಲಾಗಿದೆ.</p>.<p>ಸದ್ಯ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಸ್ಟಮ್ಸ್ ಅಧಿಕಾರಿಗಳು ಸಹ ಆಸ್ಪತ್ರೆಯಲ್ಲಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/india-news/kerala-cms-principal-secretary-removed-following-alleged-nexus-with-smuggling-racket-742871.html" target="_blank">ಚಿನ್ನ ಕಳ್ಳಸಾಗಾಣಿಕೆ ಆರೋಪ: ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರ್ಯದರ್ಶಿ ತಲೆದಂಡ</a></p>.<p>ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ವಿಚಾರಣೆಗೆ ಸಮನ್ಸ್ ಪಡೆದಿರುವ ಅವರನ್ನು ಅನಾರೋಗ್ಯದಿಂದಾಗಿ ಶುಕ್ರವಾರ ಸಂಜೆ ಪಿಆರ್ಎಸ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅಲ್ಲಿಂದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.</p>.<p>‘ಶಿವಶಂಕರ್ (57) ಅವರನ್ನು ಅಸೌಖ್ಯ, ಬೆನ್ನು ನೋವು ಹಾಗೂ ತಲೆಸುತ್ತುವಿಕೆ ಕಾರಣ ಅಕ್ಟೋಬರ್ 16ರಂದು ಸಂಜೆ 6 ಗಂಟೆಗೆ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕರೆತರುವ ವೇಳೆ ಅವರ ರಕ್ತದೊತ್ತಡ ಅತಿಯಾಗಿತ್ತು. ಇಸಿಜಿಯಲ್ಲಿ ಸಣ್ಣ ವ್ಯತ್ಯಾಸ ಕಂಡುಬಂದಿತ್ತು. ಅವರನ್ನು ಹೃದಯ ಚಿಕಿತ್ಸಾ ವಿಭಾಗದ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು’ ಎಂದು ಪಿಆರ್ಎಸ್ ಖಾಸಗಿ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/india-news/kerala-gold-smuggling-aimed-at-terror-funding-uae-consulate-documents-were-faked-nia-744828.html" target="_blank">ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಭಯೋತ್ಪಾದಕರಿಗೆ ನೆರವಾಗುವುದೇ ಗುರಿ ಎಂದ ಎನ್ಐಎ</a></p>.<p>ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಅಕ್ಟೋಬರ್ 23ರ ವರೆಗೂ ಶಿವಶಂಕರ್ ಅವರನ್ನು ಬಂಧಿಸಬಾರದು ಎಂದು ಜಾರಿ ನಿರ್ದೇಶನಾಲಯಕ್ಕೆ ಕೇರಳ ಹೈಕೋರ್ಟ್ ಗುರುವಾರ ನಿರ್ದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>