ಕೊಯಮತ್ತೂರು (ತಮಿಳುನಾಡು): ಕೇರಳದಿಂದ ವರದಿಯಾದ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಇಲ್ಲಿನ ಅಕ್ಕಸಾಲಿಗರೊಬ್ಬರ ನಿವಾಸದಲ್ಲಿ ಬುಧವಾರ ಬೆಳಿಗ್ಗೆ ಶೋಧ ಕಾರ್ಯ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ.
ನಂದಕುಮಾರ್ ಎಂಬುವರ ಮನೆ ಮೇಲೆ ಎನ್ಐಎದ ನಾಲ್ವರು ಸದಸ್ಯರತಂಡ ದಾಳಿ ನಡೆಸಿತು. ನಂದಕುಮಾರ್ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.
ಜುಲೈ 5ರಂದು ₹ 14.82 ಕೋಟಿ ಮೌಲ್ಯದ 30 ಕೆ.ಜಿ. ಚಿನ್ನ ಅಕ್ರಮ ಸಾಗಣೆ ಪ್ರಕರಣವನ್ನು ತಿರುವನಂತಪುರದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿದ್ದರು. ಪ್ರಮುಖ ಸಂಚುಕೋರರಾದ ಯುನೈಟೆಡ್ ಅರಬ್ ಎಮಿರೇಟ್ಸ್ ಕಾನ್ಸುಲೇಟ್ನ ಮಾಜಿ ಉದ್ಯೋಗಿ ಸ್ವಪ್ನ ಸುರೇಶ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.