<p><strong>ಕೊಚ್ಚಿ</strong>: ‘ಚಿನ್ನ ಕಳ್ಳ ಸಾಗಣೆ ಕಸ್ಟಮ್ಸ್ ಕಾಯ್ದೆಯ ವ್ಯಾಪ್ತಿಗೆ ಬರುವುದರಿಂದ, ಇದನ್ನು ಭಯೋತ್ಪಾದಕ ಕೃತ್ಯ ಕಾಯ್ದೆಯಡಿ ವ್ಯಾಖ್ಯಾನಿಸಲು ಬರುವುದಿಲ್ಲ’ ಎಂದು ಕೇರಳ ಹೈಕೋರ್ಟ್ ಶನಿವಾರ ತಿಳಿಸಿತು.</p>.<p>ರಾಜತಾಂತ್ರಿಕ ಮಾರ್ಗವನ್ನು ದುರುಪಯೋಗಪಡಿಸಿಕೊಂಡು ಚಿನ್ನ ಕಳ್ಳ ಸಾಗಣೆ ಮಾಡಿದ ಪ್ರಕರಣದ ಹತ್ತು ಆರೋಪಿಗಳಿಗೆ ಎನ್ಐಎ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶವನ್ನು ಪ್ರಶ್ನಿಸಿ ಎನ್ಐಎ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು.</p>.<p>ನ್ಯಾಯಮೂರ್ತಿಗಳಾದ ಎ. ಹರಿಪ್ರಸಾದ್ ಮತ್ತು ಎಂ.ಅನಿತಾ ಅವರನ್ನೊಳಗೊಂಡ ಹೈಕೋರ್ಟ್ನ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>ಕಳೆದ ವರ್ಷ ಜುಲೈ 5 ರಂದು ಕೇರಳದಲ್ಲಿ ರಾಜತಾಂತ್ರಿಕ ಮಾರ್ಗವನ್ನು ದುರುಪಯೋಗಪಡಿಸಿಕೊಂಡು ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾಗಣೆ ಮಾಡುತ್ತಿದ್ದ ₹15 ಕೋಟಿ ಮೌಲ್ಯದ 30 ಕೆ.ಜಿ ಬಂಗಾರವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.</p>.<p>ಪ್ರಕರಣದ ತನಿಖೆ ನಡೆಸಿದ ಎನ್ಐಎ ಜುಲೈ 11ರಂದು ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಹಾಗೂ ಅವರ ಜೊತೆಗಿದ್ದ ಸಂದೀಪ್ ನಾಯರ್ ಎಂಬುವರನ್ನು ಬೆಂಗಳೂರಿನಲ್ಲಿ ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ</strong>: ‘ಚಿನ್ನ ಕಳ್ಳ ಸಾಗಣೆ ಕಸ್ಟಮ್ಸ್ ಕಾಯ್ದೆಯ ವ್ಯಾಪ್ತಿಗೆ ಬರುವುದರಿಂದ, ಇದನ್ನು ಭಯೋತ್ಪಾದಕ ಕೃತ್ಯ ಕಾಯ್ದೆಯಡಿ ವ್ಯಾಖ್ಯಾನಿಸಲು ಬರುವುದಿಲ್ಲ’ ಎಂದು ಕೇರಳ ಹೈಕೋರ್ಟ್ ಶನಿವಾರ ತಿಳಿಸಿತು.</p>.<p>ರಾಜತಾಂತ್ರಿಕ ಮಾರ್ಗವನ್ನು ದುರುಪಯೋಗಪಡಿಸಿಕೊಂಡು ಚಿನ್ನ ಕಳ್ಳ ಸಾಗಣೆ ಮಾಡಿದ ಪ್ರಕರಣದ ಹತ್ತು ಆರೋಪಿಗಳಿಗೆ ಎನ್ಐಎ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶವನ್ನು ಪ್ರಶ್ನಿಸಿ ಎನ್ಐಎ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು.</p>.<p>ನ್ಯಾಯಮೂರ್ತಿಗಳಾದ ಎ. ಹರಿಪ್ರಸಾದ್ ಮತ್ತು ಎಂ.ಅನಿತಾ ಅವರನ್ನೊಳಗೊಂಡ ಹೈಕೋರ್ಟ್ನ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>ಕಳೆದ ವರ್ಷ ಜುಲೈ 5 ರಂದು ಕೇರಳದಲ್ಲಿ ರಾಜತಾಂತ್ರಿಕ ಮಾರ್ಗವನ್ನು ದುರುಪಯೋಗಪಡಿಸಿಕೊಂಡು ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾಗಣೆ ಮಾಡುತ್ತಿದ್ದ ₹15 ಕೋಟಿ ಮೌಲ್ಯದ 30 ಕೆ.ಜಿ ಬಂಗಾರವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.</p>.<p>ಪ್ರಕರಣದ ತನಿಖೆ ನಡೆಸಿದ ಎನ್ಐಎ ಜುಲೈ 11ರಂದು ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಹಾಗೂ ಅವರ ಜೊತೆಗಿದ್ದ ಸಂದೀಪ್ ನಾಯರ್ ಎಂಬುವರನ್ನು ಬೆಂಗಳೂರಿನಲ್ಲಿ ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>