<p><strong>ತಿರುವನಂತಪುರ: </strong>ವರದಕ್ಷಿಣೆಯನ್ನು ತಡೆಗಟ್ಟುವ ಕ್ರಮದ ಭಾಗವಾಗಿ ಕೇರಳದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು, ಸರ್ಕಾರಿ ನೌಕರರಿಗೆ ವರದಕ್ಷಿಣೆ ತೆಗೆದುಕೊಂಡಿಲ್ಲ ಎನ್ನುವ ಬಗ್ಗೆ ಅಫಿಡ್ವಿಟ್ (ಪ್ರಮಾಣಪತ್ರ) ಸಲ್ಲಿಸಲು ಸೂಚಿಸಿದೆ.</p>.<p>ಕೇರಳದಲ್ಲಿ ಇತ್ತೀಚೆಗೆ ವರದಕ್ಷಿಣೆ ಸಾವು ಮತ್ತು ಕಿರುಕುಳಗಳು ನಡೆದಿದ್ದು, ಇದರಲ್ಲಿ ಸರ್ಕಾರಿ ನೌಕರರು ಸಹ ಆರೋಪಿಯಾಗಿದ್ದಾರೆ. ಹಾಗಾಗಿ, ಅಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಈ ಬಗ್ಗೆ ಸುತ್ತೋಲೆ ಹೊರಡಿಸಿದೆ.</p>.<p>ಕೇರಳದಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದು, ಈ ಕಾಯ್ದೆಯ ಅನ್ವಯ ಸರ್ಕಾರಿ ನೌಕರರಿಗೆ ಪ್ರಮಾಣಪತ್ರ ಸಲ್ಲಿಸುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ‘ವರದಕ್ಷಿಣೆ ಪಡೆಯುವುದು ಮತ್ತು ನೀಡುವ ಪ್ರಕ್ರಿಯೆಯಲ್ಲಿ ಸರ್ಕಾರಿ ನೌಕರರು ಭಾಗಿಯಾಗುತ್ತಿರುವುದು ನಾಚಿಕೆಗೇಡಿನ ಸಂಗತಿ’ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.</p>.<p>ಮದುವೆಯಾಗಿರುವ ಪುರುಷ ಸರ್ಕಾರಿ ನೌಕರರು ಒಂದು ತಿಂಗಳ ಅವಧಿಯೊಳಗೆ ತಾವು ವರದಕ್ಷಿಣೆ ಪಡೆದಿಲ್ಲ ಎನ್ನುವ ಕುರಿತು ಪ್ರಮಾಣಪತ್ರ ಸಲ್ಲಿಸಬೇಕು. ಈ ಪತ್ರಕ್ಕೆ ನೌಕರನ ಹೆಂಡತಿ, ತಂದೆ–ತಾಯಿ ಮತ್ತು ಅತ್ತೆ–ಮಾವ ಸಹಿ ಹಾಕಬೇಕು. ಈ ಬಗ್ಗೆ ಇಲಾಖೆಯ ಮುಖ್ಯಸ್ಥರು, ಜಿಲ್ಲಾ ವರದಕ್ಷಿಣೆ ನಿಷೇಧ ಅಧಿಕಾರಿಗೆ ಅರ್ಧವಾರ್ಷಿಕ ವರದಿ ಸಲ್ಲಿಸಬೇಕು ಎಂದೂ ನಿರ್ದೇಶನ ನೀಡಲಾಗಿದೆ.</p>.<p>ವರದಕ್ಷಿಣೆ ವಿರುದ್ಧ ಜಾಗೃತಿ ಮೂಡಿಸಲು ಈಚೆಗಷ್ಟೇ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಅವರು ವಿವಿಧ ಗಾಂಧಿಪರ ಸಂಘಟನೆಗಳ ಜತೆಗೂಡಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ: </strong>ವರದಕ್ಷಿಣೆಯನ್ನು ತಡೆಗಟ್ಟುವ ಕ್ರಮದ ಭಾಗವಾಗಿ ಕೇರಳದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು, ಸರ್ಕಾರಿ ನೌಕರರಿಗೆ ವರದಕ್ಷಿಣೆ ತೆಗೆದುಕೊಂಡಿಲ್ಲ ಎನ್ನುವ ಬಗ್ಗೆ ಅಫಿಡ್ವಿಟ್ (ಪ್ರಮಾಣಪತ್ರ) ಸಲ್ಲಿಸಲು ಸೂಚಿಸಿದೆ.</p>.<p>ಕೇರಳದಲ್ಲಿ ಇತ್ತೀಚೆಗೆ ವರದಕ್ಷಿಣೆ ಸಾವು ಮತ್ತು ಕಿರುಕುಳಗಳು ನಡೆದಿದ್ದು, ಇದರಲ್ಲಿ ಸರ್ಕಾರಿ ನೌಕರರು ಸಹ ಆರೋಪಿಯಾಗಿದ್ದಾರೆ. ಹಾಗಾಗಿ, ಅಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಈ ಬಗ್ಗೆ ಸುತ್ತೋಲೆ ಹೊರಡಿಸಿದೆ.</p>.<p>ಕೇರಳದಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದು, ಈ ಕಾಯ್ದೆಯ ಅನ್ವಯ ಸರ್ಕಾರಿ ನೌಕರರಿಗೆ ಪ್ರಮಾಣಪತ್ರ ಸಲ್ಲಿಸುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ‘ವರದಕ್ಷಿಣೆ ಪಡೆಯುವುದು ಮತ್ತು ನೀಡುವ ಪ್ರಕ್ರಿಯೆಯಲ್ಲಿ ಸರ್ಕಾರಿ ನೌಕರರು ಭಾಗಿಯಾಗುತ್ತಿರುವುದು ನಾಚಿಕೆಗೇಡಿನ ಸಂಗತಿ’ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.</p>.<p>ಮದುವೆಯಾಗಿರುವ ಪುರುಷ ಸರ್ಕಾರಿ ನೌಕರರು ಒಂದು ತಿಂಗಳ ಅವಧಿಯೊಳಗೆ ತಾವು ವರದಕ್ಷಿಣೆ ಪಡೆದಿಲ್ಲ ಎನ್ನುವ ಕುರಿತು ಪ್ರಮಾಣಪತ್ರ ಸಲ್ಲಿಸಬೇಕು. ಈ ಪತ್ರಕ್ಕೆ ನೌಕರನ ಹೆಂಡತಿ, ತಂದೆ–ತಾಯಿ ಮತ್ತು ಅತ್ತೆ–ಮಾವ ಸಹಿ ಹಾಕಬೇಕು. ಈ ಬಗ್ಗೆ ಇಲಾಖೆಯ ಮುಖ್ಯಸ್ಥರು, ಜಿಲ್ಲಾ ವರದಕ್ಷಿಣೆ ನಿಷೇಧ ಅಧಿಕಾರಿಗೆ ಅರ್ಧವಾರ್ಷಿಕ ವರದಿ ಸಲ್ಲಿಸಬೇಕು ಎಂದೂ ನಿರ್ದೇಶನ ನೀಡಲಾಗಿದೆ.</p>.<p>ವರದಕ್ಷಿಣೆ ವಿರುದ್ಧ ಜಾಗೃತಿ ಮೂಡಿಸಲು ಈಚೆಗಷ್ಟೇ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಅವರು ವಿವಿಧ ಗಾಂಧಿಪರ ಸಂಘಟನೆಗಳ ಜತೆಗೂಡಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>