<p><strong>ತಿರುವನಂತಪುರ</strong>: ಪರಿಸರ ಸ್ನೇಹಿ ಕಾರ್ಯಕ್ರಮಗಳಿಗೆ ಒತ್ತು ನೀಡುವ ಸಲುವಾಗಿ ಕೇರಳ ಸರ್ಕಾರ ಹರಿತ ಕೇರಳಂ ಮಿಷನ್ ಎಂಬ ಕಾರ್ಯಕ್ರಮ ಜಾರಿಗೊಳಿಸಿದೆ.</p>.<p>ಈ ಕಾರ್ಯಕ್ರಮದಡಿ, ಸರ್ಕಾರಿ ಕಚೇರಿಗಳಲ್ಲಿ ಮರುಬಳಕೆ ಮಾಡಬಹುದಾದ ವಸ್ತುಗಳನ್ನು ಬಳಸಲು ಮತ್ತು ಪ್ಲಾಸ್ಟಿಕ್ ಬಳಕೆಯನ್ನು ಸ್ಥಗಿತಗೊಳಿಸಲು ಉತ್ತೇಜನ ನೀಡಲಾಗುತ್ತದೆ. ಇಂಥ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕಚೇರಿಗಳನ್ನು ‘ಹಸಿರು’ ಕಚೇರಿಗಳೆಂದು ಘೋಷಿಸಲಾಗುತ್ತದೆ.</p>.<p>‘ಪರಿಸರ ಸ್ನೇಹಿ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕಚೇರಿಗಳಿಗೆ ಜನವರಿ 26ರಂದು ‘ಹಸಿರು ಪ್ರಮಾಣಪತ್ರ’ವನ್ನು ವಿತರಿಸಲಾಗುವುದು’ ಎಂದು ಹರಿತ ಕೇರಳಂ ಮಿಷನ್ನ ಅಧಿಕಾರಿಗಳು ಹೇಳಿದ್ದಾರೆ.</p>.<p>‘ರಾಜ್ಯದ ಜಲಮೂಲಗಳಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ಮಣ್ಣಿನ ಗುಣಮಟ್ಟ ಸಂರಕ್ಷಣೆ ಹಾಗೂ ರಾಜ್ಯದಲ್ಲಿ ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಮಿಷನ್ನಡಿ ಅರ್ಹ ಕಚೇರಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ’ ಎಂದು ಮಿಷನ್ನ ಜಿಲ್ಲಾ ಸಮನ್ವಯಾಧಿಕಾರಿ ಡಿ.ಹುಮಾಯೂನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಪರಿಸರ ಸ್ನೇಹಿ ಕಾರ್ಯಕ್ರಮಗಳಿಗೆ ಒತ್ತು ನೀಡುವ ಸಲುವಾಗಿ ಕೇರಳ ಸರ್ಕಾರ ಹರಿತ ಕೇರಳಂ ಮಿಷನ್ ಎಂಬ ಕಾರ್ಯಕ್ರಮ ಜಾರಿಗೊಳಿಸಿದೆ.</p>.<p>ಈ ಕಾರ್ಯಕ್ರಮದಡಿ, ಸರ್ಕಾರಿ ಕಚೇರಿಗಳಲ್ಲಿ ಮರುಬಳಕೆ ಮಾಡಬಹುದಾದ ವಸ್ತುಗಳನ್ನು ಬಳಸಲು ಮತ್ತು ಪ್ಲಾಸ್ಟಿಕ್ ಬಳಕೆಯನ್ನು ಸ್ಥಗಿತಗೊಳಿಸಲು ಉತ್ತೇಜನ ನೀಡಲಾಗುತ್ತದೆ. ಇಂಥ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕಚೇರಿಗಳನ್ನು ‘ಹಸಿರು’ ಕಚೇರಿಗಳೆಂದು ಘೋಷಿಸಲಾಗುತ್ತದೆ.</p>.<p>‘ಪರಿಸರ ಸ್ನೇಹಿ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕಚೇರಿಗಳಿಗೆ ಜನವರಿ 26ರಂದು ‘ಹಸಿರು ಪ್ರಮಾಣಪತ್ರ’ವನ್ನು ವಿತರಿಸಲಾಗುವುದು’ ಎಂದು ಹರಿತ ಕೇರಳಂ ಮಿಷನ್ನ ಅಧಿಕಾರಿಗಳು ಹೇಳಿದ್ದಾರೆ.</p>.<p>‘ರಾಜ್ಯದ ಜಲಮೂಲಗಳಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ಮಣ್ಣಿನ ಗುಣಮಟ್ಟ ಸಂರಕ್ಷಣೆ ಹಾಗೂ ರಾಜ್ಯದಲ್ಲಿ ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಮಿಷನ್ನಡಿ ಅರ್ಹ ಕಚೇರಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ’ ಎಂದು ಮಿಷನ್ನ ಜಿಲ್ಲಾ ಸಮನ್ವಯಾಧಿಕಾರಿ ಡಿ.ಹುಮಾಯೂನ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>