ಈ ನಡುವೆ, ವಿರೋಧಪಕ್ಷದ ನಾಯಕ ವಿ.ಡಿ.ಸತೀಶನ್ ಅವರು, ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಇರುವ ಆತ್ಮೀಯ ಒಡನಾಟವನ್ನು ಮುಚ್ಚಿಡಲು ಇದೊಂದು ಗಿಮಿಕ್ ಅಷ್ಟೇ ಎಂದು ವ್ಯಂಗ್ಯವಾಡಿದ್ದರು. ವಿಶ್ವವಿದ್ಯಾಲಯಗಳಿಗೆ ನೇಮಕ ಕುರಿತಂತೆ ರಾಜ್ಯಪಾಲರು ಸರ್ಕಾರದ ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಜಕೀಯ ಹಿನ್ನೆಲೆಯವರನ್ನು ರಾಜಭವನಕ್ಕೆ ನೇಮಿಸಲಾಗಿದೆ ಎಂದು ಹೇಳಿದ್ದಾರೆ.