ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ರಾಜ್ಯಪಾಲರಿಗೆ ಕೋವಿಡ್‌ ದೃಢ

Last Updated 7 ನವೆಂಬರ್ 2020, 11:01 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದ ರಾಜ್ಯಪಾಲರಾದ ಆರಿಫ್‌ ಮೊಹಮ್ಮದ್‌ ಖಾನ್‌ ಅವರಿಗೆ ಕೊರೊನಾ ಸೋಂಕು ಇರುವುದು ಶನಿವಾರ ದೃಢಪಟ್ಟಿದೆ.

‘ನನಗೆ ಕೊರೊನಾ ಸೋಂಕು ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಖಚಿತವಾಗಿದೆ. ಆದರೆ ಸೋಂಕಿನ ಲಕ್ಷಣಗಳು ನನ್ನಲ್ಲಿ ಇಲ್ಲ. ಕಳೆದ ವಾರ ನವದೆಹಲಿಯಲ್ಲಿ ನನ್ನ ಜೊತೆ ಸಂಪರ್ಕಕ್ಕೆ ಬಂದವರೆಲ್ಲಾ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ ಅಥವಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಿ’ ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.

ನವದೆಹಲಿಯಲ್ಲಿದ್ದ ರಾಜ್ಯಪಾಲರು ಶುಕ್ರವಾರ ಬೆಳಿಗ್ಗೆ ತಿರುವನಂತಪುರಕ್ಕೆ ವಾಪಸ್ಸಾಗಿದ್ದರು. ಶನಿವಾರ ಕೋವಿಡ್‌ ಪರೀಕ್ಷೆಯನ್ನು ಸ್ವಯಂಪ್ರೇರಿತರಾಗಿ ಮಾಡಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT