<p><strong>ತಿರುವನಂತಪುರ:</strong>ಕೇರಳ ಸರ್ಕಾರವು ಕೊರೊನಾ ವೈರಸ್ ಪ್ರಸರಣವನ್ನು ನಿಯಂತ್ರಿಸಲು ಸಿಆರ್ಪಿಸಿಯ ಸೆಕ್ಷನ್ 144 ಜಾರಿಗೊಳಿಸಿದ್ದು, ಐದಕ್ಕೂ ಹೆಚ್ಚು ಜನರು ಸೇರದಂತೆ ನಿರ್ಬಂಧ ವಿಧಿಸಿದೆ.</p>.<p>ಈ ಬಗ್ಗೆ ಮುಖ್ಯ ಕಾಯದರ್ಶಿ ವಿಶ್ವಾಸ್ ಮೆಹ್ತಾ ಅವರುಗುರುವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.</p>.<p>ಜನರು ಗುಂಪು ಸೇರುವುದರಿಂದ ಕೊರೊನಾ ಸೋಂಕು ಹರಡುವ ಅಪಾಯ ಹೆಚ್ಚಿರುತ್ತದೆ. ಹಾಗಾಗಿ ಅ.3 ರಂದು ಬೆಳಿಗ್ಗೆ 9 ಗಂಟೆಯಿಂದ ಈ ಆದೇಶ ಜಾರಿಗೆ ಬರಲಿದ್ದು, ಅ.31 ತನಕ ಜಾರಿಯಲಿರುತ್ತದೆ.ರಾಜ್ಯದಲ್ಲಿ ಜನರು ಸಭೆ ಸೇರುವುದನ್ನು ತಡೆಯಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.</p>.<p>ಆಯಾ ಜಿಲ್ಲೆಗಳಜವಾಬ್ದಾರಿ ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದ್ದು, ಜಿಲ್ಲೆಗಳ ಪರಿಸ್ಥಿತಿಯ ಪರಿಶೀಲನೆ ಮಾಡಬೇಕು. ಅಲ್ಲದೆ ಸೆಕ್ಷನ್ 144 ರಡಿ ಕೊರೊನಾ ಸೋಂಕು ಪ್ರಸರಣ ನಿಯಂತ್ರಿಸುವ ಕ್ರಮಗಳನ್ನು ಅವರು ತೆಗೆದುಕೊಳ್ಳಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.</p>.<p>ಕೇರಳದಲ್ಲಿ ಕೋವಿಡ್ ಪ್ರಕರಣಗಳು2 ಲಕ್ಷ ದಾಟಿದ್ದು, ಗುರುವಾರ8,135 ಹೊಸ ಪ್ರಕರಣಗಳು ವರದಿಯಾಗಿದೆ. ಈವರೆಗೆಕೋವಿಡ್ಗೆ 771 ಮಂದಿ ಮೃತಪಟ್ಟಿದ್ದಾರೆ.</p>.<p>ಕೇರಳದಲ್ಲಿಕಳೆದ ವಾರಗಳಿಂದ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಸೆ.11 ತನಕ ಪ್ರಕರಣಗಳು ಒಂದು ಲಕ್ಷ ದಾಟಿದ್ದವು. ಇಲ್ಲಿ72,339 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 2.43 ಲಕ್ಷ ಕ್ಕೂ ಹೆಚ್ಚು ಜನರ ಮೇಲೆ ನಿಗಾ ಇಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong>ಕೇರಳ ಸರ್ಕಾರವು ಕೊರೊನಾ ವೈರಸ್ ಪ್ರಸರಣವನ್ನು ನಿಯಂತ್ರಿಸಲು ಸಿಆರ್ಪಿಸಿಯ ಸೆಕ್ಷನ್ 144 ಜಾರಿಗೊಳಿಸಿದ್ದು, ಐದಕ್ಕೂ ಹೆಚ್ಚು ಜನರು ಸೇರದಂತೆ ನಿರ್ಬಂಧ ವಿಧಿಸಿದೆ.</p>.<p>ಈ ಬಗ್ಗೆ ಮುಖ್ಯ ಕಾಯದರ್ಶಿ ವಿಶ್ವಾಸ್ ಮೆಹ್ತಾ ಅವರುಗುರುವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.</p>.<p>ಜನರು ಗುಂಪು ಸೇರುವುದರಿಂದ ಕೊರೊನಾ ಸೋಂಕು ಹರಡುವ ಅಪಾಯ ಹೆಚ್ಚಿರುತ್ತದೆ. ಹಾಗಾಗಿ ಅ.3 ರಂದು ಬೆಳಿಗ್ಗೆ 9 ಗಂಟೆಯಿಂದ ಈ ಆದೇಶ ಜಾರಿಗೆ ಬರಲಿದ್ದು, ಅ.31 ತನಕ ಜಾರಿಯಲಿರುತ್ತದೆ.ರಾಜ್ಯದಲ್ಲಿ ಜನರು ಸಭೆ ಸೇರುವುದನ್ನು ತಡೆಯಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.</p>.<p>ಆಯಾ ಜಿಲ್ಲೆಗಳಜವಾಬ್ದಾರಿ ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದ್ದು, ಜಿಲ್ಲೆಗಳ ಪರಿಸ್ಥಿತಿಯ ಪರಿಶೀಲನೆ ಮಾಡಬೇಕು. ಅಲ್ಲದೆ ಸೆಕ್ಷನ್ 144 ರಡಿ ಕೊರೊನಾ ಸೋಂಕು ಪ್ರಸರಣ ನಿಯಂತ್ರಿಸುವ ಕ್ರಮಗಳನ್ನು ಅವರು ತೆಗೆದುಕೊಳ್ಳಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.</p>.<p>ಕೇರಳದಲ್ಲಿ ಕೋವಿಡ್ ಪ್ರಕರಣಗಳು2 ಲಕ್ಷ ದಾಟಿದ್ದು, ಗುರುವಾರ8,135 ಹೊಸ ಪ್ರಕರಣಗಳು ವರದಿಯಾಗಿದೆ. ಈವರೆಗೆಕೋವಿಡ್ಗೆ 771 ಮಂದಿ ಮೃತಪಟ್ಟಿದ್ದಾರೆ.</p>.<p>ಕೇರಳದಲ್ಲಿಕಳೆದ ವಾರಗಳಿಂದ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಸೆ.11 ತನಕ ಪ್ರಕರಣಗಳು ಒಂದು ಲಕ್ಷ ದಾಟಿದ್ದವು. ಇಲ್ಲಿ72,339 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 2.43 ಲಕ್ಷ ಕ್ಕೂ ಹೆಚ್ಚು ಜನರ ಮೇಲೆ ನಿಗಾ ಇಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>