<p><strong>ತಿರುವನಂತಪುರ:</strong>ರಾಜ್ಯದ ಸಾರ್ವಜನಿಕ ಉದ್ದಿಮೆಗಳ (ಪಿಎಸ್ಯು) ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷಗಳಿಗೆ ಹೆಚ್ಚಿಸುವ ತನ್ನ ನಿರ್ಧಾರವನ್ನು ಕೇರಳ ಸರ್ಕಾರ ಬುಧವಾರ ಹಿಂಪಡೆದಿದೆ.</p>.<p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿ.ಎಂ ಕಚೇರಿ ಹೇಳಿಕೆ ತಿಳಿಸಿದೆ.</p>.<p>ಸಾರ್ವಜನಿಕ ವಲಯದಲ್ಲಿ ವೃತ್ತಿಜೀವನದ ಕನಸು ಕಾಣುತ್ತಿರುವ ರಾಜ್ಯದ ಯುವಕರಿಗೆಎಲ್ಡಿಎಫ್ ಸರ್ಕಾರದ ನಿರ್ಧಾರ ದ್ರೋಹ ಬಗೆದಂತೆ ಎಂದು ಆರೋಪಿಸಿ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಭಟನೆ ವ್ಯಕ್ತಪಡಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.</p>.<p>ರಾಜ್ಯದ ಬಹುತೇಕ ಪಿಎಸ್ಯುಗಳ ನೌಕರರ ನಿವೃತ್ತಿ ವಯಸ್ಸನ್ನು ಸರ್ಕಾರ ಏಕರೂಪವಾಗಿ 60ಕ್ಕೆ ಹೆಚ್ಚಿಸಿತ್ತು, ಇದು ಎಡಪಂಥೀಯ ಯುವ ಸಂಘಟನೆಯಿಂದ ತೀವ್ರ ಟೀಕೆಗೆ ಗುರಿಯಾಗಿತ್ತು.</p>.<p>ಕೇರಳ ರಾಜ್ಯ ವಿದ್ಯುತ್ ಮಂಡಳಿ,ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಜಲ ಪ್ರಾಧಿಕಾರಹೊರತುಪಡಿಸಿ ರಾಜ್ಯದ ಪಿಎಸ್ಯುಗಳ ವೇತನ, ವೇತನ ರಚನೆಗೆ ಸಾಮಾನ್ಯ ಚೌಕಟ್ಟು ರೂಪಿಸುವ ಬಗ್ಗೆ ಸಮಗ್ರ ಅಧ್ಯಯನ ನಡೆಸಿದ ತಜ್ಞರ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಶನಿವಾರ ಈ ಆದೇಶವನ್ನು ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong>ರಾಜ್ಯದ ಸಾರ್ವಜನಿಕ ಉದ್ದಿಮೆಗಳ (ಪಿಎಸ್ಯು) ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷಗಳಿಗೆ ಹೆಚ್ಚಿಸುವ ತನ್ನ ನಿರ್ಧಾರವನ್ನು ಕೇರಳ ಸರ್ಕಾರ ಬುಧವಾರ ಹಿಂಪಡೆದಿದೆ.</p>.<p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿ.ಎಂ ಕಚೇರಿ ಹೇಳಿಕೆ ತಿಳಿಸಿದೆ.</p>.<p>ಸಾರ್ವಜನಿಕ ವಲಯದಲ್ಲಿ ವೃತ್ತಿಜೀವನದ ಕನಸು ಕಾಣುತ್ತಿರುವ ರಾಜ್ಯದ ಯುವಕರಿಗೆಎಲ್ಡಿಎಫ್ ಸರ್ಕಾರದ ನಿರ್ಧಾರ ದ್ರೋಹ ಬಗೆದಂತೆ ಎಂದು ಆರೋಪಿಸಿ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಭಟನೆ ವ್ಯಕ್ತಪಡಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.</p>.<p>ರಾಜ್ಯದ ಬಹುತೇಕ ಪಿಎಸ್ಯುಗಳ ನೌಕರರ ನಿವೃತ್ತಿ ವಯಸ್ಸನ್ನು ಸರ್ಕಾರ ಏಕರೂಪವಾಗಿ 60ಕ್ಕೆ ಹೆಚ್ಚಿಸಿತ್ತು, ಇದು ಎಡಪಂಥೀಯ ಯುವ ಸಂಘಟನೆಯಿಂದ ತೀವ್ರ ಟೀಕೆಗೆ ಗುರಿಯಾಗಿತ್ತು.</p>.<p>ಕೇರಳ ರಾಜ್ಯ ವಿದ್ಯುತ್ ಮಂಡಳಿ,ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಜಲ ಪ್ರಾಧಿಕಾರಹೊರತುಪಡಿಸಿ ರಾಜ್ಯದ ಪಿಎಸ್ಯುಗಳ ವೇತನ, ವೇತನ ರಚನೆಗೆ ಸಾಮಾನ್ಯ ಚೌಕಟ್ಟು ರೂಪಿಸುವ ಬಗ್ಗೆ ಸಮಗ್ರ ಅಧ್ಯಯನ ನಡೆಸಿದ ತಜ್ಞರ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಶನಿವಾರ ಈ ಆದೇಶವನ್ನು ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>