‘ಬಹುಕೋಟಿ ಸೋಲಾರ್ ವಿದ್ಯುತ್ ಘಟಕ ಹಗರಣದ ಪ್ರಮುಖ ಆರೋಪಿ ಸರಿತಾ ನಾಯರ್ ಅವರು ತಮ್ಮ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ 2013ರಲ್ಲಿ ದೂರು ದಾಖಲಿಸಿದ್ದರು. ದೂರಿನಲ್ಲಿ ಚಾಂಡಿ, ವೇಣುಗೋಪಾಲ್, ಹಿಬಿ ಇಡೆನ್, ಅಡೂರ್ ಪ್ರಕಾಶ್, ಶಾಸಕ ಎ.ಪಿ.ಅನಿಲ್ ಕುಮಾರ್, ಬಿಜೆಪಿ ಮುಖಂಡ ಎ.ಪಿ.ಅಬ್ದುಲ್ ಕುಟ್ಟಿ (ಆಗ ಕಾಂಗ್ರೆಸ್ ಶಾಸಕ) ಅವರ ಹೆಸರುಗಳನ್ನೂ ಉಲ್ಲೇಖಿಸಿದ್ದರು. ಈ ಸಂಬಂಧ ಕ್ರೈಂ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದರು. ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ಮಹಿಳೆ, ಸಿಬಿಐ ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದ್ದರು. ಪ್ರಕರಣದ ಸತ್ಯಾಸತ್ಯತೆಯನ್ನು ಬಹಿರಂಗಗೊಳಿಸುವ ಉದ್ದೇಶದಿಂದ ಇದನ್ನು ಸಿಬಿಐ ತನಿಖೆಗೆ ವಹಿಸಲು ತೀರ್ಮಾನಿಸಲಾಗಿದೆ. ಇದರಲ್ಲಿ ರಾಜಕೀಯ ದುರುದ್ದೇಶವಿಲ್ಲ’ ಎಂದು ಸಿಪಿಐ (ಎಂ) ಹಂಗಾಮಿ ಕಾರ್ಯದರ್ಶಿ ಎ.ವಿಜಯರಾಘವನ್ ಹೇಳಿದ್ದಾರೆ.