ಬೆಳಿಗ್ಗೆ 8 ಗಂಟೆಯಿಂದ ರಾಜ್ಯಪಾಲರು ಉಪವಾಸ ಆರಂಭಿಸಿದ್ದು, ಸಂಜೆ 6ರವರೆಗೆ ಮುಂದುವರಿಸುತ್ತಾರೆ. ಈ ಉಪವಾಸ ದಿನದ ಭಾಗವಾಗಿ ಗಾಂಧಿ ಸ್ಮಾರಕ ನಿಧಿ ಮತ್ತಿತರರ ಸಂಘಟನೆಗಳು ಸಂಜೆ ಗಾಂಧಿಭವನದಲ್ಲಿ ಆಯೋಜಿಸಿರುವ ಪ್ರಾರ್ಥನಾ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ. ಇದೇ ವೇಳೆ ಗಾಂಧಿ ಭವನದಲ್ಲೂ ಕೆಲವೊಂದು ಗಾಂಧಿ ಅನುಯಾಯಿ ಸಂಘಟನೆಗಳ ಕಾರ್ಯಕರ್ತರು ಬೆಳಿಗ್ಗೆಯಿಂದ ಉಪವಾಸ ಆರಂಭಿಸಿದ್ದಾರೆ.