ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಕ್ಷದ್ವೀಪ ಆಡಳಿತದ ಸುಧಾರಣಾ ಕ್ರಮಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಜಾ

Last Updated 17 ಜೂನ್ 2021, 10:40 IST
ಅಕ್ಷರ ಗಾತ್ರ

ಕೊಚ್ಚಿ: ಲಕ್ಷದ್ವೀಪ ಅಭಿವೃದ್ಧಿ ನಿಯಂತ್ರಣ ಪ್ರಾಧಿಕಾರ –2021(ಎಲ್‌ಡಿಎಆರ್‌), ಸಮಾಜ ವಿರೋಧಿ ಚಟುವಟಿಕೆ ತಡೆ ಕಾಯ್ದೆ (ಪಿಎಎಸ್ಎ) ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್‌) ಅರ್ಜಿಯನ್ನು ಕೇರಳ ಹೈಕೋರ್ಟ್‌ ಗುರುವಾರ ವಜಾಗೊಳಿಸಿದೆ.

ಈ ಸುಧಾರಣಾ ಕ್ರಮಗಳು ಕರಡು ರಚನೆ ಹಂತದಲ್ಲಿವೆ ಎಂಬುದನ್ನು ಗಮನಿಸಿದ ನ್ಯಾಯಾಲಯವು ಪಿಐಎಲ್‌ ಅನ್ನು ವಜಾಗೊಳಿಸಿದೆ. ಕಾಂಗ್ರೆಸ್‌ ನಾಯಕ ಕೆ.ಪಿ ನೌಶಾದ್‌ ಆಲಿ ಅವರು ಈ ಸಂಬಂಧ ಅರ್ಜಿ ಸಲ್ಲಿಸಿದ್ದರು.

ಈ ಹಿಂದೆ ನ್ಯಾಯಾಲಯವು ಅರ್ಜಿ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

ಈ ಪಿಎಎಸ್ಎ ಕಾಯ್ದೆಯು ಒಬ್ಬ ವ್ಯಕ್ತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದೇ ಒಂದು ವರ್ಷದವರೆಗೆ ಬಂಧನದಲ್ಲಿಡುವ ಅಧಿಕಾರವನ್ನು ನೀಡುತ್ತದೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT