ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ಕಳ್ಳಸಾಗಣೆ ಪ್ರಕರಣ: ಸ್ವಪ್ನಾ ಸುರೇಶ್‌ಗೆ ಜಾಮೀನು

ಇತರ ಆರೋಪಿಗಳಿಗೂ ಜಾಮೀನು ನೀಡಿದ ಕೇರಳ ಹೈಕೋರ್ಟ್
Last Updated 2 ನವೆಂಬರ್ 2021, 10:39 IST
ಅಕ್ಷರ ಗಾತ್ರ

ಕೊಚ್ಚಿ: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ದಾಖಲಿಸಿದ್ದ ಯುಎಪಿಎ (ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ) ಪ್ರಕರಣದಲ್ಲಿ ಆರೋಪಿ ಸ್ವಪ್ನಾ ಸುರೇಶ್ ಅವರಿಗೆ ಕೇರಳ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಕೆ. ವಿನೋದ್‌ಚಂದ್ರನ್ ಮತ್ತು ಸಿ. ಜಯಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠವು ಸ್ವಪ್ನಾ ಸುರೇಶ್ ಜತೆಗೆ ಇತರ ಆರೋಪಿಗಳಾದ ಮೊಹಮ್ಮದ್ ಶಫಿ ಪಿ, ಜಲಾಲ್ ಎ.ಎಂ., ರಾಬಿನ್ಸ್ ಹಮೀದ್, ರಮೀಸ್ ಕೆ.ಟಿ., ಶರಫುದ್ದೀನ್ ಕೆ.ಟಿ., ಸರಿತಾ ಪಿ.ಎಸ್ ಮತ್ತು ಮೊಹಮ್ಮದ್ ಅಲಿ ಅವರಿಗೂ ಜಾಮೀನು ನೀಡಿದೆ.

ಎನ್‌ಐಎ ದಾಖಲಿಸಿದ್ದ ಪ್ರಕರಣದಲ್ಲಿ ಸ್ವಪ್ನಾ ಅವರಿಗೆ ಜಾಮೀನು ಮಂಜೂರಾಗಿದೆ. ಅವರನ್ನು ಕೋಫೆಪೋಸಾ ಕಾಯ್ದೆ (ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಾಣಿಕೆ ಚಟುವಟಿಕೆಗಳ ತಡೆ) ಅಡಿಯಲ್ಲಿ ಬಂಧನದಲ್ಲಿ ಇರಿಸಲಾಗಿರುವುದರಿಂದ ಅವರು ನ್ಯಾಯಾಂಗ ಬಂಧನದಿಂದ ಹೊರಬರಬಹುದು ಎಂದೂ ಸ್ವಪ್ನಾಸುರೇಶ್ ಪರ ವಕೀಲ ಸೂರಜ್ ಟಿ. ಎಲೆಂಜಿಕಲ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT