ಚಿನ್ನ ಕಳ್ಳಸಾಗಣೆ ಆರೋಪಿ ಮತ್ತು ಯುಎಇ ಕಾನ್ಸುಲೇಟ್ ಕಚೇರಿಯ ಮಾಜಿ ಉದ್ಯೋಗಿ ಸ್ವಪ್ನಾ ಸುರೇಶ್, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ವೇಳೆ ಮುಖ್ಯಮಂತ್ರಿ ಸೂಚನೆಯಂತೆ ಚಿನ್ನ ಹಾಗೂ ಡಾಲರ್ ಕಳ್ಳಸಾಗಣೆ ಮಾಡಿರುವುದಾಗಿ ಬಲವಂತದ ಹೇಳಿಕೆ ಕೊಡಿಸಿದ್ದಾರೆ ಎಂದು ನೀಡಿದ ಹೇಳಿಕೆ ಸಂಬಂಧ ನ್ಯಾಯಾಂಗ ತನಿಖೆಗೆ ಕೇರಳ ಸರ್ಕಾರ ತನಿಖಾ ಆಯೋಗ ರಚಿಸಿತ್ತು. ಈ ಸಂಬಂಧ ಮೇ 7ರಂದು ಹೊರಡಿಸಿದ್ದ ಅಧಿಸೂಚನೆಗೆ ತಡೆ ನೀಡುವಂತೆ ಕೋರಿ ಜಾರಿ ನಿರ್ದೇಶನಾಲಯ ಅರ್ಜಿಸಲ್ಲಿಸಿತ್ತು.