<p class="title"><strong>ಕೊಚ್ಚಿ</strong>: ಮರಡು ಫ್ಲಾಟ್ಸ್ ನೆಲಸಮ ಪ್ರಕರಣದ ತೀರ್ಪಿಗೆ ಸಂಬಂಧಿಸಿದಂತೆ ಹಾಲಿ ನ್ಯಾಯಮೂರ್ತಿ ಮತ್ತು ಇಬ್ಬರು ವಿಶ್ರಾಂತ ನ್ಯಾಯಮೂರ್ತಿಗಳ ವಿರುದ್ಧ ನ್ಯಾಯಾಂಗ ದುರ್ವರ್ತನೆ ಕುರಿತ ಆರೋಪದ ಅಂಶಗಳನ್ನು ಪರಿಗಣಿಸುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ.</p>.<p class="title">‘ಇಂಥ ಅರ್ಜಿಗಳನ್ನು ವಿಚಾರಣೆಗೆ ಪುರಸ್ಕರಿಸಿದರೆ ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುವುದಾದರೂ ಹೇಗೆ?’ ಅವರು ಹೇಗೆ ತೀರ್ಪು ನೀಡಬಲ್ಲರು? ಅವರೂ ಕೂಡ ಮನುಷ್ಯರೇ’ ಎಂದು ನ್ಯಾಯಮೂರ್ತಿ ಪಿ.ಬಿ.ಸುರೇಶ್ ಕುಮಾರ್ ಅವರು ಈ ಕುರಿತ ಅರ್ಜಿಗಳ ಅಲ್ಪ ಕಾಲದ ವಿಚಾರಣೆಯ ಸಂದರ್ಭದಲ್ಲಿ ಹೇಳಿದರು.</p>.<p>ಅರ್ಜಿಗಳು ವಿಚಾರಣೆಗೆ ಅರ್ಹವೇ ಎಂದಷ್ಟೇ ಪರಿಶೀಲಿಸಲಾಗುವುದು. ನ್ಯಾಯಾಂಗದ ದುರ್ವರ್ತನೆ ಆರೋಪ ಕುರಿತ ಅಂಶಗಳನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸೆ.6ಕ್ಕೆ ವಿಚಾರಣೆ ಮುಂದೂಡಲಾಯಿತು.</p>.<p class="title">ವಕೀಲ ಯಶವಂತ ಶೆಣೈ ಅವರ ಮೂಲಕ ಸಲ್ಲಿಸಿದ್ದ ಎರಡೂ ಅರ್ಜಿಗಳಲ್ಲಿ, ನ್ಯಾಯಾಂಗದ ದುರ್ವರ್ತನೆ ಕುರಿತ ತಮ್ಮ ಆರೋಪಗಳ ತನಿಖೆಗೆ ಸಮಿತಿ ರಚಿಸಬೇಕು ಎಂದು ಕೋರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೊಚ್ಚಿ</strong>: ಮರಡು ಫ್ಲಾಟ್ಸ್ ನೆಲಸಮ ಪ್ರಕರಣದ ತೀರ್ಪಿಗೆ ಸಂಬಂಧಿಸಿದಂತೆ ಹಾಲಿ ನ್ಯಾಯಮೂರ್ತಿ ಮತ್ತು ಇಬ್ಬರು ವಿಶ್ರಾಂತ ನ್ಯಾಯಮೂರ್ತಿಗಳ ವಿರುದ್ಧ ನ್ಯಾಯಾಂಗ ದುರ್ವರ್ತನೆ ಕುರಿತ ಆರೋಪದ ಅಂಶಗಳನ್ನು ಪರಿಗಣಿಸುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ.</p>.<p class="title">‘ಇಂಥ ಅರ್ಜಿಗಳನ್ನು ವಿಚಾರಣೆಗೆ ಪುರಸ್ಕರಿಸಿದರೆ ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುವುದಾದರೂ ಹೇಗೆ?’ ಅವರು ಹೇಗೆ ತೀರ್ಪು ನೀಡಬಲ್ಲರು? ಅವರೂ ಕೂಡ ಮನುಷ್ಯರೇ’ ಎಂದು ನ್ಯಾಯಮೂರ್ತಿ ಪಿ.ಬಿ.ಸುರೇಶ್ ಕುಮಾರ್ ಅವರು ಈ ಕುರಿತ ಅರ್ಜಿಗಳ ಅಲ್ಪ ಕಾಲದ ವಿಚಾರಣೆಯ ಸಂದರ್ಭದಲ್ಲಿ ಹೇಳಿದರು.</p>.<p>ಅರ್ಜಿಗಳು ವಿಚಾರಣೆಗೆ ಅರ್ಹವೇ ಎಂದಷ್ಟೇ ಪರಿಶೀಲಿಸಲಾಗುವುದು. ನ್ಯಾಯಾಂಗದ ದುರ್ವರ್ತನೆ ಆರೋಪ ಕುರಿತ ಅಂಶಗಳನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸೆ.6ಕ್ಕೆ ವಿಚಾರಣೆ ಮುಂದೂಡಲಾಯಿತು.</p>.<p class="title">ವಕೀಲ ಯಶವಂತ ಶೆಣೈ ಅವರ ಮೂಲಕ ಸಲ್ಲಿಸಿದ್ದ ಎರಡೂ ಅರ್ಜಿಗಳಲ್ಲಿ, ನ್ಯಾಯಾಂಗದ ದುರ್ವರ್ತನೆ ಕುರಿತ ತಮ್ಮ ಆರೋಪಗಳ ತನಿಖೆಗೆ ಸಮಿತಿ ರಚಿಸಬೇಕು ಎಂದು ಕೋರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>