<p><strong>ತಿರುವನಂತಪುರಂ:</strong> ಕೇರಳ ರಾಜ್ಯ ತೀವ್ರವಾದಿ ಮತ್ತು ಭಯೋತ್ಪಾದನೆ ವಿಷಯಗಳಲ್ಲಿ ‘ಹಾಟ್ ಸ್ಪಾಟ್‘ ಆಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷಜೆಪಿ ನಡ್ಡಾ ಹೇಳಿದ್ದಾರೆ.</p>.<p>ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೇರಳದಲ್ಲಿ ಹಿಂಸೆ,ಕೋಮು ಉದ್ವಿಗ್ನತೆ ಹೆಚ್ಚುತ್ತಿದ್ದು ದೇವರ ನಾಡು ತೀವ್ರವಾದಿಅಂಶಗಳಲ್ಲಿ‘ಹಾಟ್ ಸ್ಪಾಟ್‘ ಆಗಿದೆ. ಇಲ್ಲಿ ನಾಗರಿಕರಬದುಕು ಸುರಕ್ಷಿತವಾಗಿಲ್ಲ ಎಂದು ನಡ್ಡಾ ಹೇಳಿದ್ದಾರೆ.</p>.<p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕುಟುಂಬ ಕೂಡ ಸರ್ಕಾರದಲ್ಲಿ ತೊಡಗಿಕೊಂಡಿದೆ. ಅವರ ಮಗಳು ಮತ್ತು ಅಳಿಯ ಸರ್ಕಾರದಲ್ಲಿ ಹಸ್ತಾಕ್ಷೇಪ ಮಾಡುತ್ತಿದ್ದಾರೆ. ಇಲ್ಲಿ ಇರುವುದು ಅಧಿಕೃತವಾಗಿ ಕುಟುಂಬ ಸರ್ಕಾರ ಎಂದು ನಡ್ಡಾ ಆರೋಪ ಮಾಡಿದ್ದಾರೆ.</p>.<p>ಕೇರಳದಲ್ಲಿ ಹಿಂಸಾಚಾರ ಮತ್ತು ಕೋಮು ಉದ್ವಿಗ್ನತೆ ಸೃಷ್ಟಿಸುವವರಿಗೆ ಮತ್ತು ಇದಕ್ಕೆ ಕುಮ್ಮಕ್ಕು ಕೊಡುವವರಿಗೆಸರ್ಕಾರ ಮೌನ ಬೆಂಬಲ ನೀಡುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.</p>.<p>ವಿಶ್ವವಿದ್ಯಾಲಯಗಳು ಸರಿದಂತೆ ವಿವಿಧ ಸರ್ಕಾರಿನೇಮಕಾತಿಗಳಲ್ಲಿ ಸರ್ಕಾರ ಸ್ವಜನಪಕ್ಷಪಾತ ಮಾಡುತ್ತಿದೆ. ಲೋಕಾಯುಕ್ತವನ್ನು ದುರ್ಬಲಗೊಳಿಸುವ ಮೂಲಕ ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ದೇಶದ ಎಲ್ಲಾ ರಾಜ್ಯಗಳಲ್ಲಿ ಇರುವ ವಿರೋಧ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷಗಳ ವಿರುದ್ಧ ಅವರು ಕಿಡಿಕಾರಿದರು. ಹರಿಯಾಣದಲ್ಲಿಮಾಜಿ ಮುಖ್ಯಮಂತ್ರಿ ದೇವಿಲಾಲ್ ಜನ್ಮದಿನ ಆಚರಿಸಲು ಸೇರಿದ್ದ ವಿರೋಧ ಪಕ್ಷಗಳು ಹಾಗೂ ಪ್ರಾದೇಶಿಕ ಪಕ್ಷಗಳನ್ನು ಅವರು ಇದೇ ವೇಳೆ ಟೀಕೆ ಮಾಡಿದರು.</p>.<p>ಈ ಪಕ್ಷಗಳು ಎರಡು ವಿಷಯಗಳಲ್ಲಿ ಸಾಮಾನ್ಯವಾಗಿವೆ. ಒಂದು ಕುಟುಂಬ ರಾಜಕಾರಣದಲ್ಲಿ ತೊಡಗಿರುವುದು ಮತ್ತೊಂದು ಭ್ರಷ್ಟಾಚಾರ ಮಾತನಾಡುತ್ತಿರುವುದುಎಂದು ಹೇಳಿದರು.</p>.<p>ಕೇರಳ ಸರ್ಕಾರ ಆರ್ಥಿಕ ಶಿಸ್ತು ಕಾಪಾಡುತ್ತಿಲ್ಲ ಎಂದು ನಡ್ಡಾಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ:</strong> ಕೇರಳ ರಾಜ್ಯ ತೀವ್ರವಾದಿ ಮತ್ತು ಭಯೋತ್ಪಾದನೆ ವಿಷಯಗಳಲ್ಲಿ ‘ಹಾಟ್ ಸ್ಪಾಟ್‘ ಆಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷಜೆಪಿ ನಡ್ಡಾ ಹೇಳಿದ್ದಾರೆ.</p>.<p>ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೇರಳದಲ್ಲಿ ಹಿಂಸೆ,ಕೋಮು ಉದ್ವಿಗ್ನತೆ ಹೆಚ್ಚುತ್ತಿದ್ದು ದೇವರ ನಾಡು ತೀವ್ರವಾದಿಅಂಶಗಳಲ್ಲಿ‘ಹಾಟ್ ಸ್ಪಾಟ್‘ ಆಗಿದೆ. ಇಲ್ಲಿ ನಾಗರಿಕರಬದುಕು ಸುರಕ್ಷಿತವಾಗಿಲ್ಲ ಎಂದು ನಡ್ಡಾ ಹೇಳಿದ್ದಾರೆ.</p>.<p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕುಟುಂಬ ಕೂಡ ಸರ್ಕಾರದಲ್ಲಿ ತೊಡಗಿಕೊಂಡಿದೆ. ಅವರ ಮಗಳು ಮತ್ತು ಅಳಿಯ ಸರ್ಕಾರದಲ್ಲಿ ಹಸ್ತಾಕ್ಷೇಪ ಮಾಡುತ್ತಿದ್ದಾರೆ. ಇಲ್ಲಿ ಇರುವುದು ಅಧಿಕೃತವಾಗಿ ಕುಟುಂಬ ಸರ್ಕಾರ ಎಂದು ನಡ್ಡಾ ಆರೋಪ ಮಾಡಿದ್ದಾರೆ.</p>.<p>ಕೇರಳದಲ್ಲಿ ಹಿಂಸಾಚಾರ ಮತ್ತು ಕೋಮು ಉದ್ವಿಗ್ನತೆ ಸೃಷ್ಟಿಸುವವರಿಗೆ ಮತ್ತು ಇದಕ್ಕೆ ಕುಮ್ಮಕ್ಕು ಕೊಡುವವರಿಗೆಸರ್ಕಾರ ಮೌನ ಬೆಂಬಲ ನೀಡುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.</p>.<p>ವಿಶ್ವವಿದ್ಯಾಲಯಗಳು ಸರಿದಂತೆ ವಿವಿಧ ಸರ್ಕಾರಿನೇಮಕಾತಿಗಳಲ್ಲಿ ಸರ್ಕಾರ ಸ್ವಜನಪಕ್ಷಪಾತ ಮಾಡುತ್ತಿದೆ. ಲೋಕಾಯುಕ್ತವನ್ನು ದುರ್ಬಲಗೊಳಿಸುವ ಮೂಲಕ ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ದೇಶದ ಎಲ್ಲಾ ರಾಜ್ಯಗಳಲ್ಲಿ ಇರುವ ವಿರೋಧ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷಗಳ ವಿರುದ್ಧ ಅವರು ಕಿಡಿಕಾರಿದರು. ಹರಿಯಾಣದಲ್ಲಿಮಾಜಿ ಮುಖ್ಯಮಂತ್ರಿ ದೇವಿಲಾಲ್ ಜನ್ಮದಿನ ಆಚರಿಸಲು ಸೇರಿದ್ದ ವಿರೋಧ ಪಕ್ಷಗಳು ಹಾಗೂ ಪ್ರಾದೇಶಿಕ ಪಕ್ಷಗಳನ್ನು ಅವರು ಇದೇ ವೇಳೆ ಟೀಕೆ ಮಾಡಿದರು.</p>.<p>ಈ ಪಕ್ಷಗಳು ಎರಡು ವಿಷಯಗಳಲ್ಲಿ ಸಾಮಾನ್ಯವಾಗಿವೆ. ಒಂದು ಕುಟುಂಬ ರಾಜಕಾರಣದಲ್ಲಿ ತೊಡಗಿರುವುದು ಮತ್ತೊಂದು ಭ್ರಷ್ಟಾಚಾರ ಮಾತನಾಡುತ್ತಿರುವುದುಎಂದು ಹೇಳಿದರು.</p>.<p>ಕೇರಳ ಸರ್ಕಾರ ಆರ್ಥಿಕ ಶಿಸ್ತು ಕಾಪಾಡುತ್ತಿಲ್ಲ ಎಂದು ನಡ್ಡಾಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>