<p><strong>ತಿರುವನಂತಪುರ:</strong> ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ದು, ಹೈಕೋರ್ಟ್ ಮೆಟ್ಟಿಲೇರಿದೆ. ಈ ನಡುವೆ ನೆರೆಯ ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಾರ್ಯಕ್ರಮದ ವೇದಿಕೆಯಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಹಾಡುವ ಮೂಲಕ ಗಮನ ಸೆಳೆದಿದ್ದಾರೆ.</p>.<p>ಈ ಕುರಿತು ಕೇರಳದ ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ಹಾಗೂ ಸಂಸದ ಜಾನ್ ಬ್ರಿಟಾಸ್ ಟ್ವೀಟಿಸಿದ್ದು, 'ಕೇರಳ ನಮ್ಮ ಹೆಮ್ಮೆ' ಎಂದಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/karnataka-news/cm-basavaraj-bommai-clarifies-on-school-opening-after-hijab-row-in-karnataka-909775.html" itemprop="url">ಇದೇ 14 ರಿಂದ ಹೈಸ್ಕೂಲ್ ಆರಂಭ: ಪಿಯುಸಿ ಸದ್ಯಕ್ಕಿಲ್ಲ- ಮುಖ್ಯಮಂತ್ರಿ </a></p>.<p>ಕೇರಳ ರಾಜಧಾನಿ ತಿರುವನಂತಪುರದಲ್ಲಿ ನಡೆದ ಹೊಸ ಶಾಲಾ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಹಾಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.</p>.<p>ಕರ್ನಾಟಕದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಬಗ್ಗೆ ಹೈಕೋರ್ಟ್ ಗುರುವಾರ ಮಧ್ಯಂತರ ಮೌಖಿಕ ಆದೇಶವನ್ನು ಹೊರಡಿಸಿದೆ. ನ್ಯಾಯಪೀಠವು ವಿಚಾರಣೆಯನ್ನು ಫೆಬ್ರುವರಿ 14ಕ್ಕೆ ಮುಂದೂಡಿದ್ದು, ಅಂತಿಮ ತೀರ್ಪು ಹೊರಬೀಳುವವರೆಗೂ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಸೂಚಕ ಉಡುಪುಗಳನ್ನು ಹಾಕಿಕೊಳ್ಳಬಾರದು ಎಂದು ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ದು, ಹೈಕೋರ್ಟ್ ಮೆಟ್ಟಿಲೇರಿದೆ. ಈ ನಡುವೆ ನೆರೆಯ ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಾರ್ಯಕ್ರಮದ ವೇದಿಕೆಯಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಹಾಡುವ ಮೂಲಕ ಗಮನ ಸೆಳೆದಿದ್ದಾರೆ.</p>.<p>ಈ ಕುರಿತು ಕೇರಳದ ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ಹಾಗೂ ಸಂಸದ ಜಾನ್ ಬ್ರಿಟಾಸ್ ಟ್ವೀಟಿಸಿದ್ದು, 'ಕೇರಳ ನಮ್ಮ ಹೆಮ್ಮೆ' ಎಂದಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/karnataka-news/cm-basavaraj-bommai-clarifies-on-school-opening-after-hijab-row-in-karnataka-909775.html" itemprop="url">ಇದೇ 14 ರಿಂದ ಹೈಸ್ಕೂಲ್ ಆರಂಭ: ಪಿಯುಸಿ ಸದ್ಯಕ್ಕಿಲ್ಲ- ಮುಖ್ಯಮಂತ್ರಿ </a></p>.<p>ಕೇರಳ ರಾಜಧಾನಿ ತಿರುವನಂತಪುರದಲ್ಲಿ ನಡೆದ ಹೊಸ ಶಾಲಾ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಹಾಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.</p>.<p>ಕರ್ನಾಟಕದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಬಗ್ಗೆ ಹೈಕೋರ್ಟ್ ಗುರುವಾರ ಮಧ್ಯಂತರ ಮೌಖಿಕ ಆದೇಶವನ್ನು ಹೊರಡಿಸಿದೆ. ನ್ಯಾಯಪೀಠವು ವಿಚಾರಣೆಯನ್ನು ಫೆಬ್ರುವರಿ 14ಕ್ಕೆ ಮುಂದೂಡಿದ್ದು, ಅಂತಿಮ ತೀರ್ಪು ಹೊರಬೀಳುವವರೆಗೂ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಸೂಚಕ ಉಡುಪುಗಳನ್ನು ಹಾಕಿಕೊಳ್ಳಬಾರದು ಎಂದು ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>