ಕರ್ನಾಟಕದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಬಗ್ಗೆ ಹೈಕೋರ್ಟ್ ಗುರುವಾರ ಮಧ್ಯಂತರ ಮೌಖಿಕ ಆದೇಶವನ್ನು ಹೊರಡಿಸಿದೆ. ನ್ಯಾಯಪೀಠವು ವಿಚಾರಣೆಯನ್ನು ಫೆಬ್ರುವರಿ 14ಕ್ಕೆ ಮುಂದೂಡಿದ್ದು, ಅಂತಿಮ ತೀರ್ಪು ಹೊರಬೀಳುವವರೆಗೂ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಸೂಚಕ ಉಡುಪುಗಳನ್ನು ಹಾಕಿಕೊಳ್ಳಬಾರದು ಎಂದು ಸೂಚಿಸಿದೆ.