ನವದೆಹಲಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪ್ರಧಾನ ಕಾರ್ಯದರ್ಶಿ ಆಗಿದ್ದ ಐಎಎಸ್ ಅಧಿಕಾರಿ ಎಂ. ಶಿವಶಂಕರ್ ಭಾಗಿಯಾಗಿದ್ದಾರೆ ಎನ್ನಲಾಗಿರುವ ಚಿನ್ನ ಕಳ್ಳಸಾಗಾಣೆ ಮೊಕದ್ದಮೆ ಕುರಿತು ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ), ಮೊಕದ್ದಮೆಯ ತನಿಖೆ ನಡೆಸಲು ಕೇರಳ ಸರ್ಕಾರ ಆಯೋಗವೊಂದನ್ನು ರಚಿಸಿದೆ ಎಂದು ಹೇಳಿದೆ.