<p><strong>ತಿರುವನಂತಪುರ</strong>: ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದ ಮಾಫಿ ಸಾಕ್ಷಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಕೇರಳದ ಶಾಸಕ ಕೆ.ಬಿ. ಗಣೇಶ್ ಕುಮಾರ್ ಅವರ ಕಚೇರಿ ಸಿಬ್ಬಂದಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p>ಪ್ರದೀಪ್ ಕೋಟ್ಟತ್ತಲ ಬಂಧಿತ ಆರೋಪಿ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಕಾಸರಗೋಡು ನಿವಾಸಿ ವಿಪಿನ್ಲಾಲ್ ಎಂಬುವವರಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಈತನನ್ನು ಕೊಲ್ಲಂ ಜಿಲ್ಲೆಯ ಪತ್ತನಾಪುರದಲ್ಲಿರುವ ಶಾಸಕರ ಕಚೇರಿಯಿಂದ ಬಂಧಿಸಲಾಗಿದೆ.</p>.<p>ಈತ ಬೆದರಿಕೆಯೊಡ್ಡಿರುವುದಾಗಿ ಪ್ರಕರಣದಲ್ಲಿ ಸಾಕ್ಷಿಯಾಗಿರುವ ಇನ್ನೊಬ್ಬ ವ್ಯಕ್ತಿ ಕೂಡ ಆರೋಪಿಸಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಗಣೇಶ್ ಕುಮಾರ್, ಪ್ರದೀಪ್ನನ್ನು ತಮ್ಮ ಕಚೇರಿಯಿಂದ ಹೊರಹಾಕಲಾಗಿದೆ ಎಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದ್ದಾರೆ. ಗಣೇಶ್ ಅವರು ಕೇರಳದ ಆಡಳಿತಾರೂಢ ಎಲ್ಡಿಎಫ್ ಮೈತ್ರಿಕೂಟದ ಬೆಂಬಲಿಗ ಶಾಸಕರಾಗಿದ್ದಾರೆ.</p>.<p>ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದಿಲೀಪ್ ಮತ್ತು ಗಣೇಶ್ ಕುಮಾರ್ ಆಪ್ತರಾಗಿದ್ದು, ದಿಲೀಪ್ ಸೂಚನೆಯ ಮೇರೆಗೆ ಸಾಕ್ಷಿಗೆ ಬೆದರಿಕೆಯೊಡ್ಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ ಪಲ್ಸರ್ ಸುನಿ ಹಾಗೂ ಇತರ ಆರೋಪಿಗಳ ಜೊತೆ ನಂಟು ಹೊಂದಿರುವ ಆರೋಪದಲ್ಲಿ ವಿಪಿನ್ಲಾಲ್ನನ್ನು ಆರಂಭದಲ್ಲಿ ಆರೋಪಿಯನ್ನಾಗಿಸಲಾಗಿತ್ತು.</p>.<p>ಆರೋಪಿಗಳ ವಿರುದ್ಧ ಹೇಳಿಕೆ ನೀಡಿರುವ ಕಾರಣ, ಪ್ರದೀಪ್ ಫೋನ್ ಹಾಗೂ ಪತ್ರಗಳ ಮೂಲಕ ತನಗೆ ಬೆದರಿಕೆಯೊಡ್ಡಿರುವುದಾಗಿ ವಿಪಿನ್ಲಾಲ್ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದರು.</p>.<p>ನಿರೀಕ್ಷಣಾ ಜಾಮೀನಿಗಾಗಿ ಪ್ರದೀಪ್ ಸಲ್ಲಿಸಿದ್ದ ಅರ್ಜಿಯನ್ನು ಕಾಸರಗೋಡಿನ ಸ್ಥಳೀಯ ನ್ಯಾಯಾಲಯ ವಜಾಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದ ಮಾಫಿ ಸಾಕ್ಷಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಕೇರಳದ ಶಾಸಕ ಕೆ.ಬಿ. ಗಣೇಶ್ ಕುಮಾರ್ ಅವರ ಕಚೇರಿ ಸಿಬ್ಬಂದಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p>ಪ್ರದೀಪ್ ಕೋಟ್ಟತ್ತಲ ಬಂಧಿತ ಆರೋಪಿ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಕಾಸರಗೋಡು ನಿವಾಸಿ ವಿಪಿನ್ಲಾಲ್ ಎಂಬುವವರಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಈತನನ್ನು ಕೊಲ್ಲಂ ಜಿಲ್ಲೆಯ ಪತ್ತನಾಪುರದಲ್ಲಿರುವ ಶಾಸಕರ ಕಚೇರಿಯಿಂದ ಬಂಧಿಸಲಾಗಿದೆ.</p>.<p>ಈತ ಬೆದರಿಕೆಯೊಡ್ಡಿರುವುದಾಗಿ ಪ್ರಕರಣದಲ್ಲಿ ಸಾಕ್ಷಿಯಾಗಿರುವ ಇನ್ನೊಬ್ಬ ವ್ಯಕ್ತಿ ಕೂಡ ಆರೋಪಿಸಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಗಣೇಶ್ ಕುಮಾರ್, ಪ್ರದೀಪ್ನನ್ನು ತಮ್ಮ ಕಚೇರಿಯಿಂದ ಹೊರಹಾಕಲಾಗಿದೆ ಎಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದ್ದಾರೆ. ಗಣೇಶ್ ಅವರು ಕೇರಳದ ಆಡಳಿತಾರೂಢ ಎಲ್ಡಿಎಫ್ ಮೈತ್ರಿಕೂಟದ ಬೆಂಬಲಿಗ ಶಾಸಕರಾಗಿದ್ದಾರೆ.</p>.<p>ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದಿಲೀಪ್ ಮತ್ತು ಗಣೇಶ್ ಕುಮಾರ್ ಆಪ್ತರಾಗಿದ್ದು, ದಿಲೀಪ್ ಸೂಚನೆಯ ಮೇರೆಗೆ ಸಾಕ್ಷಿಗೆ ಬೆದರಿಕೆಯೊಡ್ಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ ಪಲ್ಸರ್ ಸುನಿ ಹಾಗೂ ಇತರ ಆರೋಪಿಗಳ ಜೊತೆ ನಂಟು ಹೊಂದಿರುವ ಆರೋಪದಲ್ಲಿ ವಿಪಿನ್ಲಾಲ್ನನ್ನು ಆರಂಭದಲ್ಲಿ ಆರೋಪಿಯನ್ನಾಗಿಸಲಾಗಿತ್ತು.</p>.<p>ಆರೋಪಿಗಳ ವಿರುದ್ಧ ಹೇಳಿಕೆ ನೀಡಿರುವ ಕಾರಣ, ಪ್ರದೀಪ್ ಫೋನ್ ಹಾಗೂ ಪತ್ರಗಳ ಮೂಲಕ ತನಗೆ ಬೆದರಿಕೆಯೊಡ್ಡಿರುವುದಾಗಿ ವಿಪಿನ್ಲಾಲ್ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದರು.</p>.<p>ನಿರೀಕ್ಷಣಾ ಜಾಮೀನಿಗಾಗಿ ಪ್ರದೀಪ್ ಸಲ್ಲಿಸಿದ್ದ ಅರ್ಜಿಯನ್ನು ಕಾಸರಗೋಡಿನ ಸ್ಥಳೀಯ ನ್ಯಾಯಾಲಯ ವಜಾಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>