<p><strong>ನವದೆಹಲಿ:</strong> ತಿರುವನಂತಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 'ಅದಾನಿ ಎಂಟರ್ಪ್ರೈಸಸ್'ಗೆ ಗುತ್ತಿಗೆ ನೀಡುವ ಕೇಂದ್ರದ ನಿರ್ಧಾರದ ವಿರುದ್ಧ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದೆ.</p>.<p>ಇದಕ್ಕೂ ಮೊದಲು ಎಲ್ಡಿಎಫ್ ಸರ್ಕಾರ ಕೇರಳ ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೆ, 'ರಾಜ್ಯ ಸರ್ಕಾರದ ಅರ್ಜಿಯು ಕೇಂದ್ರದ ಖಾಸಗೀಕರಣದ ನೀತಿಗಳ ವಿರುದ್ಧವಾಗಿದೆ. ಅಲ್ಲದೆ, ಈ ಅರ್ಜಿಯಲ್ಲಿ ಪ್ರಾಮುಖ್ಯತೆ ಇಲ್ಲ,' ಎಂದು ಅದನ್ನು ತಳ್ಳಿ ಹಾಕಿತ್ತು. ಕೇರಳ ಹೈಕೋರ್ಟ್ನ ಈ ತೀರ್ಪನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನೆ ಮಾಡಿದೆ.</p>.<p>ಹೈಕೋರ್ಟ್ ತೀರ್ಪಿನ ಮಧ್ಯಂತರ ತಡೆ ಕೋರಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ವಾದಿಸಲು ವಕೀಲ ಸಿ. ಕೆ. ಶಸಿ ಅವರನ್ನು ನಿಯೋಜಿಸಲಾಗಿದೆ.</p>.<p>'ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಸಂಸ್ಥೆ ಅದಾನಿ ಎಂಟರ್ಪ್ರೈಸಸ್ಗೆ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡುವ ಪ್ರಯತ್ನದಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಅನಿಯಂತ್ರಿತ ಮತ್ತು ಕಾನೂನುಬಾಹಿರ ಕ್ರಮಕ್ಕೆ ಕೈ ಹಾಕಿದೆ,' ಎಂದು ಶಶಿ ಅಭಿಪ್ರಾಯಪಟ್ಟಿದ್ದಾರೆ.</p>.<p>ಸರ್ವಪಕ್ಷ ಸಭೆ ನಡೆಸಿದ ನಂತರ ಕೇರಳ ಸರ್ಕಾರ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಅಲ್ಲದೆ, ವಿಮಾನ ನಿಲ್ದಾಣವನ್ನು ಅದಾನಿ ಎಂಟರ್ಪ್ರೈಸಸ್ಗೆ ಗುತ್ತಿಗೆ ನೀಡುವ ಕೇಂದ್ರ ಸಚಿವ ಸಂಪುಟ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಆ ಸಭೆಯಲ್ಲಿ ಒತ್ತಾಯಿಸಲಾಗಿತ್ತು.</p>.<p>ಲಖನೌ, ಜೈಪುರ, ಗುವಾಹಟಿ, ತಿರುವನಂತಪುರ, ಮಂಗಳೂರು, ಅಹಮದಾಬಾದ್ ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಕೇಂದ್ರದ ಪಿಪಿಪಿ (ಸಾರ್ವಜನಿಕ-ಖಾಸಗಿ ಸಹಭಾಗಿತ್ವ) ಯೋಜನೆ ಅಡಿಯಲ್ಲಿ ತನ್ನ ಸುಪರ್ದಿಗೆ ಪಡೆದುಕೊಳ್ಳುವಲ್ಲಿ ಅದಾನಿ ಎಂಟರ್ಪ್ರೈಸಸ್ ಯಶಸ್ವಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತಿರುವನಂತಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 'ಅದಾನಿ ಎಂಟರ್ಪ್ರೈಸಸ್'ಗೆ ಗುತ್ತಿಗೆ ನೀಡುವ ಕೇಂದ್ರದ ನಿರ್ಧಾರದ ವಿರುದ್ಧ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದೆ.</p>.<p>ಇದಕ್ಕೂ ಮೊದಲು ಎಲ್ಡಿಎಫ್ ಸರ್ಕಾರ ಕೇರಳ ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೆ, 'ರಾಜ್ಯ ಸರ್ಕಾರದ ಅರ್ಜಿಯು ಕೇಂದ್ರದ ಖಾಸಗೀಕರಣದ ನೀತಿಗಳ ವಿರುದ್ಧವಾಗಿದೆ. ಅಲ್ಲದೆ, ಈ ಅರ್ಜಿಯಲ್ಲಿ ಪ್ರಾಮುಖ್ಯತೆ ಇಲ್ಲ,' ಎಂದು ಅದನ್ನು ತಳ್ಳಿ ಹಾಕಿತ್ತು. ಕೇರಳ ಹೈಕೋರ್ಟ್ನ ಈ ತೀರ್ಪನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನೆ ಮಾಡಿದೆ.</p>.<p>ಹೈಕೋರ್ಟ್ ತೀರ್ಪಿನ ಮಧ್ಯಂತರ ತಡೆ ಕೋರಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ವಾದಿಸಲು ವಕೀಲ ಸಿ. ಕೆ. ಶಸಿ ಅವರನ್ನು ನಿಯೋಜಿಸಲಾಗಿದೆ.</p>.<p>'ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಸಂಸ್ಥೆ ಅದಾನಿ ಎಂಟರ್ಪ್ರೈಸಸ್ಗೆ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡುವ ಪ್ರಯತ್ನದಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಅನಿಯಂತ್ರಿತ ಮತ್ತು ಕಾನೂನುಬಾಹಿರ ಕ್ರಮಕ್ಕೆ ಕೈ ಹಾಕಿದೆ,' ಎಂದು ಶಶಿ ಅಭಿಪ್ರಾಯಪಟ್ಟಿದ್ದಾರೆ.</p>.<p>ಸರ್ವಪಕ್ಷ ಸಭೆ ನಡೆಸಿದ ನಂತರ ಕೇರಳ ಸರ್ಕಾರ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಅಲ್ಲದೆ, ವಿಮಾನ ನಿಲ್ದಾಣವನ್ನು ಅದಾನಿ ಎಂಟರ್ಪ್ರೈಸಸ್ಗೆ ಗುತ್ತಿಗೆ ನೀಡುವ ಕೇಂದ್ರ ಸಚಿವ ಸಂಪುಟ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಆ ಸಭೆಯಲ್ಲಿ ಒತ್ತಾಯಿಸಲಾಗಿತ್ತು.</p>.<p>ಲಖನೌ, ಜೈಪುರ, ಗುವಾಹಟಿ, ತಿರುವನಂತಪುರ, ಮಂಗಳೂರು, ಅಹಮದಾಬಾದ್ ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಕೇಂದ್ರದ ಪಿಪಿಪಿ (ಸಾರ್ವಜನಿಕ-ಖಾಸಗಿ ಸಹಭಾಗಿತ್ವ) ಯೋಜನೆ ಅಡಿಯಲ್ಲಿ ತನ್ನ ಸುಪರ್ದಿಗೆ ಪಡೆದುಕೊಳ್ಳುವಲ್ಲಿ ಅದಾನಿ ಎಂಟರ್ಪ್ರೈಸಸ್ ಯಶಸ್ವಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>