ತಿರುವನಂತಪುರ: ರಾಜಕಾರಣಿಗಳು ಚುನಾವಣೆಯಲ್ಲಿ ಆಯ್ಕೆಯಾದಾಗ ಅವರಿಗೆ ಕಾರ್ಯಕರ್ತರು, ಅಭಿಮಾನಿಗಳು ಅಭಿನಂದನೆ, ಸನ್ಮಾನ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಸಾಮಾನ್ಯ. ಇಂಥ ಸಮಾರಂಭಗಳಲ್ಲಿ ಅವರಿಗೆ ಶಾಲು, ಹೂಗುಚ್ಛ, ಹಾರ–ತುರಾಯಿ, ಸ್ಮರಣಿಕೆ ನೀಡುವುದೂ ಸಹಜ. ಆದರೆ, ಸ್ಮರಣಿಕೆಗಳನ್ನು ನೀಡುವ ಬದಲು ನನಗೆ ಛತ್ರಿ ನೀಡಿ ಎಂದು ಕೇರಳದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸಿಪಿಐ (ಸಂ) ಸಂಸದ ಎ.ಎ. ರಹೀಮ್ ಮನವಿ ಮಾಡಿದ್ದಾರೆ.