<p><strong>ತಿರುವನಂತಪುರ</strong>: ಅತ್ಯಾಚಾರ ಪ್ರಕರಣದ ಆರೋಪಿ ಜಲಂಧರ್ ಡಿಯೊಸಿಸ್ನ ಬಿಷಪ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕ್ಕೆ ಫ್ರಾನ್ಸಿಸನ್ ಕ್ಲಾರಿಸ್ಟ್ ಸಭೆಯಿಂದ ಹೊರಹಾಕಲ್ಪಟ್ಟ ಕ್ರೈಸ್ತ ಸನ್ಯಾಸಿನಿ ಲೂಸಿ ಕಲಾಪುರ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು.</p>.<p>ತನ್ನ ಕೊಠಡಿಗೆ ವಿದ್ಯುತ್ ಸರಬರಾಜು ಕಡಿತಗೊಳಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ, ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ ಅವರು, ವಯನಾಡಿನ ಮನಂತ್ವಾಡಿ ಕಾನ್ವೆಂಟ್ ಮುಂದೆ ಶನಿವಾರ ಸಂಜೆ ಉಪವಾಸ ಸತ್ಯಾಗ್ರಹ ನಡೆಸಿದರು.</p>.<p>ಆದರೆ, ಶನಿವಾರ ರಾತ್ರಿ ವೇಳೆಗೆ ಪೊಲೀಸರು ಎಲೆಕ್ಟ್ರಿಷಿಯನ್ ಸಹಾಯದಿಂದ ವಿದ್ಯುತ್ ಸರಬರಾಜನ್ನು ಮರುಸ್ಥಾಪಿಸಿದರು. ಈ ಹಿನ್ನೆಲೆಯಲ್ಲಿ ಲೂಸಿ ಕಲಾಪುರ ಅವರು ಉಪವಾಸ ಸತ್ಯಾಗ್ರಹ ಹಿಂಪಡೆದರು.</p>.<p>ವರದಿಗಾರರಿಗೆ ಪ್ರತಿಕ್ರಿಯಿಸಿದ ಲೂಸಿ,‘ನಾನು ಹಲವು ವರ್ಷಗಳಿಂದ ಇದೇ ಕಾನ್ವೆಂಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದೆ. ನನಗೆ ಬೇರಲ್ಲೂ ಹೋಗಲು ಸ್ಥಳವಿಲ್ಲ. ಹಾಗಾಗಿ ಇದೇ ಕಾನ್ವೆಂಟ್ನಲ್ಲಿ ಉಳಿಯಲು ನಾನು ಇಚ್ಛಿಸುತ್ತೇನೆ. ಇದಕ್ಕಾಗಿ ನಾನು ಹೋರಾಟವನ್ನು ಮುಂದುವರಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಅತ್ಯಾಚಾರ ಪ್ರಕರಣದ ಆರೋಪಿ ಜಲಂಧರ್ ಡಿಯೊಸಿಸ್ನ ಬಿಷಪ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕ್ಕೆ ಫ್ರಾನ್ಸಿಸನ್ ಕ್ಲಾರಿಸ್ಟ್ ಸಭೆಯಿಂದ ಹೊರಹಾಕಲ್ಪಟ್ಟ ಕ್ರೈಸ್ತ ಸನ್ಯಾಸಿನಿ ಲೂಸಿ ಕಲಾಪುರ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು.</p>.<p>ತನ್ನ ಕೊಠಡಿಗೆ ವಿದ್ಯುತ್ ಸರಬರಾಜು ಕಡಿತಗೊಳಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ, ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ ಅವರು, ವಯನಾಡಿನ ಮನಂತ್ವಾಡಿ ಕಾನ್ವೆಂಟ್ ಮುಂದೆ ಶನಿವಾರ ಸಂಜೆ ಉಪವಾಸ ಸತ್ಯಾಗ್ರಹ ನಡೆಸಿದರು.</p>.<p>ಆದರೆ, ಶನಿವಾರ ರಾತ್ರಿ ವೇಳೆಗೆ ಪೊಲೀಸರು ಎಲೆಕ್ಟ್ರಿಷಿಯನ್ ಸಹಾಯದಿಂದ ವಿದ್ಯುತ್ ಸರಬರಾಜನ್ನು ಮರುಸ್ಥಾಪಿಸಿದರು. ಈ ಹಿನ್ನೆಲೆಯಲ್ಲಿ ಲೂಸಿ ಕಲಾಪುರ ಅವರು ಉಪವಾಸ ಸತ್ಯಾಗ್ರಹ ಹಿಂಪಡೆದರು.</p>.<p>ವರದಿಗಾರರಿಗೆ ಪ್ರತಿಕ್ರಿಯಿಸಿದ ಲೂಸಿ,‘ನಾನು ಹಲವು ವರ್ಷಗಳಿಂದ ಇದೇ ಕಾನ್ವೆಂಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದೆ. ನನಗೆ ಬೇರಲ್ಲೂ ಹೋಗಲು ಸ್ಥಳವಿಲ್ಲ. ಹಾಗಾಗಿ ಇದೇ ಕಾನ್ವೆಂಟ್ನಲ್ಲಿ ಉಳಿಯಲು ನಾನು ಇಚ್ಛಿಸುತ್ತೇನೆ. ಇದಕ್ಕಾಗಿ ನಾನು ಹೋರಾಟವನ್ನು ಮುಂದುವರಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>