ತಿರುವನಂತಪುರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯವನ್ನು ಆರ್ಥಿಕವಾಗಿ ಹಿಂಡುವ ಮೂಲಕ ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಆರೋಪಿಸಿದ್ದಾರೆ.
ಇಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ರಾಜ್ಯದ ಅಭಿವೃದ್ಧಿಯ ಹಾದಿಯಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತಿದೆ ಮತ್ತು ರಾಜ್ಯದ ಸೀಮಿತ ಹಕ್ಕುಗಳನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿದೆ ಎಂದೂ ಹೇಳಿದ್ದಾರೆ.
ದಕ್ಷಿಣದ ರಾಜ್ಯದ ಮೇಲೆ ಕೇಂದ್ರ ಸರ್ಕಾರವು ವಿಶಿಷ್ಟ ರೀತಿಯ ಹಣಕಾಸಿನ ಒತ್ತಡವನ್ನು ಹೇರುತ್ತಿದೆ ಮತ್ತು ದೇಶದ ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಉಲ್ಲಂಘಿಸುತ್ತಿದೆ ಎಂದಿದ್ದಾರೆ.
ರಾಜ್ಯಕ್ಕೆ ಲಭಿಸಬೇಕಾದ ಕಂದಾಯ ಅನುದಾನಕ್ಕೆ ಕತ್ತರಿ ಹಾಕಲಾಗಿದೆ ಮತ್ತು ಸಾಲದ ಮಿತಿಯನ್ನು ಮೊಟಕುಗೊಳಿಸುವ ಯತ್ನ ಕೂಡ ನಡೆಯುತ್ತಿದೆ ಎಂದೂ ಆರೋಪಿಸಿದ್ದಾರೆ.