ಪಕ್ಷದ ಪರವಾಗಿ ಪ್ರಚಾರಕ್ಕಾಗಿ ರಾಜ್ಯಕ್ಕೆ ಬಂದಿರುವ ಅವರು, ರಾಜ್ಯದ ದೇವಾಲಯಗಳನ್ನು ನಿರ್ವಹಿಸುವ ದೇವಸ್ವಂ ಮಂಡಳಿಗಳನ್ನು ರದ್ದುಪಡಿಸಿ ಭಕ್ತರಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದರು. ‘ದೇವಸ್ವಂ ಮಂಡಳಿಗಳು ಸಿಪಿಎಂ ಪಕ್ಷದ ಚಟುವಟಿಕೆಯ ಕೇಂದ್ರಗಳಾಗಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅವುಗಳನ್ನು ರದ್ದುಗೊಳಿಸಲಾಗುವುದು ಎಂದು ಭರವಸೆ ನೀಡಿದರು.